ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಹತ್ಯೆ ಸುಖದೇವ್ ಸಿಂಗ್ ಗೊಗಮೆಡಿ ಅವರು ಶೂಟೌಟ್ಗೆ ಸಾವನ್ನಪ್ಪಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾದ ದುಷ್ಕರ್ಮಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಸುಖದೇವ್ ಸಿಂಗ್ ಗೊಗಮೆಡಿ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಬಳಿಕ ಅಲ್ಲೇ ಕುಳಿತುಕೊಂಡಿದ್ದ ಇಬ್ಬರು ವ್ಯಕ್ತಿಯ ಮೇಲೂ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಕೂಡಲೇ ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



