ಜನ ಮನದ ನಾಡಿ ಮಿಡಿತ

Advertisement

ಇಲಾಖೆಯ ಸಹವಾಸ ಬೇಡವೆಂದು ರಸ್ತೆಗೆ ಕಾಂಕ್ರೀಟ್ ಹಾಕಿಸಿದ ಅಧಿಕಾರಿ..!

ಬಿ.ಸಿ.ರೋಡಿನ ವಿವೇಕನಗರ ರಸ್ತೆಯ ಗುಂಡಿಯನ್ನು ಅಧಿಕಾರಿಯೋರ್ವರು ಕಾಂಕ್ರೀಟ್ ಮಾಡಿಸಿದ ಅಪರೂಪದ ಘಟನೆ ನಿನ್ನೆ ರಾತ್ರಿ ನಡೆದಿದೆ. ಬಿ.ಸಿ.ರೋಡಿನ ಬಸ್ ನಿಲ್ದಾಣದ ಮುಂಭಾಗದ ಸರ್ವೀಸ್ ರಸ್ತೆಯಿಂದ ವಿವೇಕ ನಗರ ರಸ್ತೆಗೆ ಪ್ರವೇಶ ಮಾಡುವ ಭಾಗದಲ್ಲಿ ರಸ್ತೆಯನ್ನು ಉದ್ದಕ್ಕೆ ಅಗೆದು ಹಾಕಲಾಗಿದ್ದು, ಬಳಿಕ ಅದನ್ನು ಮುಚ್ಚದ ಕಾರಣದಿಂದಾಗಿ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಇಲ್ಲಿನ ಹೋಟೆಲ್ ಒಂದರ ಮಾಲಕರು, ನೀರಿನ ಪೈಪ್ ಅಳವಡಿಕೆಯ ಸಂದರ್ಭದಲ್ಲಿ ಕಾಂಕ್ರೀಟ್ ರಸ್ತೆಯನ್ನು ಅಗೆದುಹಾಕಿ ಹೋಗಿದ್ರು. ಇದು ಪುರಸಭಾ ಸಹಿತ ಸಂಬOಧಿಸಿದ ಎಲ್ಲಾ ಇಲಾಖೆಯ ಅಧಿಕಾರಗಳ ಕಣ್ಣಿಗೆ ಬಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ.

ಕನಿಷ್ಠ ಪಕ್ಷ ಅಗೆದು ಹಾಕಿದ ವ್ಯಕ್ತಿಯನ್ನು ಕರೆದು ಕಾಂಕ್ರೀಟ್ ಹಾಕಿಸುವ ಕೆಲಸ ಕೂಡ ಮಾಡಿಲ್ಲ ಎಂಬ ಆರೋಪಗಳು ಕೇಳಿಬಂದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದಿಯಾ ನಾಯಕ್ ಅವರು ಪುರಸಭೆಗೆ ಆರಂಭದಲ್ಲಿ ಮೌಖಿಕವಾಗಿ ಸಮಸ್ಯೆಯನ್ನು ಹೇಳಿಕೊಂಡಿದ್ದರು, ಬಳಿಕ ಲಿಖಿತವಾಗಿ ರಸ್ತೆಯನ್ನು ಸರಿಪಡಿಸುವಂತೆ ಮನವಿಯನ್ನು ಕೂಡ ಮಾಡಿದ್ದಾರೆ.

ಆದರೆ ಯಾವುದಕ್ಕೂ ಬೆಲೆ ಕೊಡದೆ ಮೌನವಾಗಿದ್ದ ಇಲಾಖೆಯ, ಸಹವಾಸವೇ ಬೇಡ ಎಂದು ಸ್ವತಃ ಕಾಂಕ್ರೀಟ್ ಹಾಕಿಸಿದ್ದಾರೆ. ರಾತ್ರಿ ವೇಳೆ ವಾಹನಗಳ ಓಡಾಟ ಕಡಿಮೆ ಇರುವ ಕಾರಣ ಸೋಮವಾರ ರಾತ್ರಿ ವೇಳೆ ಕಾಂಕ್ರೀಟ್ ಹಾಕಿದ್ದು, ಕಾಂಕ್ರೀಟ್ ಹಾಕಿಸಿದ ಅಧಿಕಾರಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!