ಬಿ.ಸಿ.ರೋಡಿನ ವಿವೇಕನಗರ ರಸ್ತೆಯ ಗುಂಡಿಯನ್ನು ಅಧಿಕಾರಿಯೋರ್ವರು ಕಾಂಕ್ರೀಟ್ ಮಾಡಿಸಿದ ಅಪರೂಪದ ಘಟನೆ ನಿನ್ನೆ ರಾತ್ರಿ ನಡೆದಿದೆ. ಬಿ.ಸಿ.ರೋಡಿನ ಬಸ್ ನಿಲ್ದಾಣದ ಮುಂಭಾಗದ ಸರ್ವೀಸ್ ರಸ್ತೆಯಿಂದ ವಿವೇಕ ನಗರ ರಸ್ತೆಗೆ ಪ್ರವೇಶ ಮಾಡುವ ಭಾಗದಲ್ಲಿ ರಸ್ತೆಯನ್ನು ಉದ್ದಕ್ಕೆ ಅಗೆದು ಹಾಕಲಾಗಿದ್ದು, ಬಳಿಕ ಅದನ್ನು ಮುಚ್ಚದ ಕಾರಣದಿಂದಾಗಿ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಇಲ್ಲಿನ ಹೋಟೆಲ್ ಒಂದರ ಮಾಲಕರು, ನೀರಿನ ಪೈಪ್ ಅಳವಡಿಕೆಯ ಸಂದರ್ಭದಲ್ಲಿ ಕಾಂಕ್ರೀಟ್ ರಸ್ತೆಯನ್ನು ಅಗೆದುಹಾಕಿ ಹೋಗಿದ್ರು. ಇದು ಪುರಸಭಾ ಸಹಿತ ಸಂಬOಧಿಸಿದ ಎಲ್ಲಾ ಇಲಾಖೆಯ ಅಧಿಕಾರಗಳ ಕಣ್ಣಿಗೆ ಬಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ.
ಕನಿಷ್ಠ ಪಕ್ಷ ಅಗೆದು ಹಾಕಿದ ವ್ಯಕ್ತಿಯನ್ನು ಕರೆದು ಕಾಂಕ್ರೀಟ್ ಹಾಕಿಸುವ ಕೆಲಸ ಕೂಡ ಮಾಡಿಲ್ಲ ಎಂಬ ಆರೋಪಗಳು ಕೇಳಿಬಂದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದಿಯಾ ನಾಯಕ್ ಅವರು ಪುರಸಭೆಗೆ ಆರಂಭದಲ್ಲಿ ಮೌಖಿಕವಾಗಿ ಸಮಸ್ಯೆಯನ್ನು ಹೇಳಿಕೊಂಡಿದ್ದರು, ಬಳಿಕ ಲಿಖಿತವಾಗಿ ರಸ್ತೆಯನ್ನು ಸರಿಪಡಿಸುವಂತೆ ಮನವಿಯನ್ನು ಕೂಡ ಮಾಡಿದ್ದಾರೆ.
ಆದರೆ ಯಾವುದಕ್ಕೂ ಬೆಲೆ ಕೊಡದೆ ಮೌನವಾಗಿದ್ದ ಇಲಾಖೆಯ, ಸಹವಾಸವೇ ಬೇಡ ಎಂದು ಸ್ವತಃ ಕಾಂಕ್ರೀಟ್ ಹಾಕಿಸಿದ್ದಾರೆ. ರಾತ್ರಿ ವೇಳೆ ವಾಹನಗಳ ಓಡಾಟ ಕಡಿಮೆ ಇರುವ ಕಾರಣ ಸೋಮವಾರ ರಾತ್ರಿ ವೇಳೆ ಕಾಂಕ್ರೀಟ್ ಹಾಕಿದ್ದು, ಕಾಂಕ್ರೀಟ್ ಹಾಕಿಸಿದ ಅಧಿಕಾರಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…