ಪುತ್ತೂರು:ಸಮಾಜ ಸೇವೆಯ ಜತೆಗೆ ವ್ಯವಹಾರಕ್ಕೆ ಪ್ರಾಮುಖ್ಯತೆಯನ್ನು ನೀಡುವ ನಿಟ್ಟಿನಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಸಮೃದ್ದಿ ಸಂಕೀರ್ಣದಲ್ಲಿ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ವತಿಯಿಂದ ಡಿ.23 ರಿಂದ 25ರವರೆಗೆ ರೋಟರಿ ಬಿಸಿನೆಸ್ ಎಕ್ಸ್ಪೋ ನಡೆಯಲಿದೆ ಎಂದು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷರಾದ ಡಾ. ರಾಜೇಶ್ ಬೆಜ್ಜಂಗಳ ಅವರು ಹೇಳಿದ್ದಾರೆ.
ಇವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಒಂದು ವಸ್ತುವಿನ ಒಂದು ಸ್ಟಾಲ್ನಂತೆ 100 ಸ್ಟಾಲ್ಗಳು, ಆಹಾರ, ವಾಹನ, ವಿಶೇಷ ಗಿಪ್ಟ್ ಕೂಪನ್ಗಳು, ವೈದ್ಯಕೀಯ ಶಿಬಿರ, ಪ್ರತಿದಿನ ಆಕರ್ಷಕ ಬಹುಮಾನಗಳು, ರಕ್ತ ಪರಿಶೋಧನ ಶಿಬಿರ, ವ್ಯವಹಾರ ವಿಚಾರ ಸಂಕಿರಣ, ನೂತನ ಉತ್ಪನ್ನಗಳ ಬಿಡುಗಡೆ, ಮನೋರಂಜನ ಕಾರ್ಯಕ್ರಮಗಳು ನಡೆಯಲಿದೆ.
ಇನ್ನು ಡಿ. 24ರಂದು ಮಧ್ಯಾಹ್ನ 2 ಗಂಟೆಗೆ ಮುಕ್ತವಾಗಿ ಆದರ್ಶ ದಂಪತಿ ಸ್ಪರ್ಧೆ ನಡೆಯಲಿದ್ದು, ಡಿ.15ರ ಮೊದಲು ಆಸಕ್ತರು ನೊಂದಾಯಿಸಿಕೊಳ್ಳಬೇಕು. ಆದರ್ಶ ದಂಪತಿ ಸ್ಪರ್ದೆಯ ದಿನ, ಶಿವಮೊಗ್ಗದಿಂದ ಕಾಮಿಡಿ ಕಿಲಾಡಿ ಖ್ಯಾತಿಯ ಕವಿತಾ ಸುಧೀಂದ್ರ ಭಾಗವಹಿಸಲಿದ್ದಾರೆ ಎಂದು ಮಾಹಿತಿಯನ್ನ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸ್ಥಾಪಕಾಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಪೂರ್ವಾಧ್ಯಕ್ಷರಾದ ರಫೀಕ್ ದರ್ಬೆ, ನವೀನ್ ಚಂದ್ರ ನಾಯಕ್, ಶಿವರಾಮ ಎನ್.ಎಸ್. ಉಪಸ್ಥಿತರಿದ್ರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…