ಜನ ಮನದ ನಾಡಿ ಮಿಡಿತ

Advertisement

ಕಾರ್ಯಕ್ರಮದಲ್ಲಿ ತುಳುನಾಡ ದೈವಗಳ ವೇಷಹಾಕಿ ಅಶ್ಲೀಲ‌ ನೃತ್ಯ..!; ತುಳುನಾಡಿನ ದೈವ ಪಾತ್ರಿಗಳು ಮತ್ತು ದೈವಾರಾಧಕರ ಭಾರೀ ಆಕ್ರೋಶ

ತುಳುನಾಡಿನ ದೈವಗಳಿಗೆ‌ ಭಾರೀ ಅವಮಾನವಾಗುತ್ತಿದೆ. ಮನರಂಜನೆಗಾಗಿ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂದು ತುಳುನಾಡಿನ ದೈವ ಪಾತ್ರಿಗಳು ಮತ್ತು ದೈವಾರಾಧಕರು ಭಾರೀ ಆಕ್ರೋಶ ಹೊರಹಾಕಿದ್ದಾರೆ.

ತುಳುನಾಡಿನ ದೈವಗಳಂತೆ ವೇಷತೊಟ್ಟು ಅಪಮಾನ ಮಾಡಲಾಗುತ್ತಿದೆ. ಹಣ ಸಂಪಾದನೆಗೆ ದೈವಗಳ‌ ವೇಷ ತೊಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇತರ ಭಾಗಗಳಲ್ಲಿ ದಂಧೆ ಶುರುವಾಗಿದೆ ಎಂದು ತುಳುನಾಡ ದೈವ‌ ಪಾತ್ರಿ ದಯಾನಂದ ಕತ್ತಲ್ಸಾರ್ ಆರೋಪಿಸಿದ್ದಾರೆ.

ಏನಿದು ಆರೋಪ?

ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಯಕ್ರಮದಲ್ಲಿ ತುಳುನಾಡ ದೈವಗಳ ವೇಷಹಾಕಿ ಅಶ್ಲೀಲ‌ ನೃತ್ಯ ಮಾಡಲಾಗುತ್ತಿದೆ. ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ ಮಾಡಲಾಗುತ್ತಿದೆ. ಕೆಲವು ಕಿಡಿಗೇಡಿಗಳು ಹಣ ಸಂಪಾದನೆಗೆ ದೈವಗಳ‌ ವೇಷತೊಡುತ್ತಿದ್ದಾರೆ. ಇದರಿಂದ ಪಂಬದ, ಪರವ, ನಲಿಕೆ ಸಮುದಾಯದವರಿಗೆ ಅವಮಾನವಾಗುತ್ತಿದೆ ಎಂದು ದೈವ ಪಾತ್ರಿಗಳು ದಯಾನಂದ ಕತ್ತಲ್ಸಾರ್ ಹೇಳಿದ್ದಾರೆ.

ಇನ್ನು ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿಯೂ ​ದಯಾನಂದ ಕತ್ತಲ್ಸಾರ್ ಎಚ್ಚರಿಕೆ ಹಾಕಿದ್ದಾರೆ. ಜೊತೆಗೆ ಅಪಚಾರದ ಬಗ್ಗೆ ಧ್ವನಿ ಎತ್ತುವಂತೆ ನಟ ರಿಷಭ್​ ಶೆಟ್ಟಿಗೆ ಒತ್ತಾಯ ಹೇರಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೂ ಆಗ್ರಹಿಸಿದ್ದಾರೆ. ಕ್ರಮಕೈಗೊಳ್ಳದಿದ್ದರೆ ದೈವಾರಾಧಕರಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ವರಿಕೆಯನ್ನು ರವಾನಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!