ತುಳುನಾಡಿನ ದೈವಗಳಿಗೆ ಭಾರೀ ಅವಮಾನವಾಗುತ್ತಿದೆ. ಮನರಂಜನೆಗಾಗಿ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂದು ತುಳುನಾಡಿನ ದೈವ ಪಾತ್ರಿಗಳು ಮತ್ತು ದೈವಾರಾಧಕರು ಭಾರೀ ಆಕ್ರೋಶ ಹೊರಹಾಕಿದ್ದಾರೆ.
ತುಳುನಾಡಿನ ದೈವಗಳಂತೆ ವೇಷತೊಟ್ಟು ಅಪಮಾನ ಮಾಡಲಾಗುತ್ತಿದೆ. ಹಣ ಸಂಪಾದನೆಗೆ ದೈವಗಳ ವೇಷ ತೊಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇತರ ಭಾಗಗಳಲ್ಲಿ ದಂಧೆ ಶುರುವಾಗಿದೆ ಎಂದು ತುಳುನಾಡ ದೈವ ಪಾತ್ರಿ ದಯಾನಂದ ಕತ್ತಲ್ಸಾರ್ ಆರೋಪಿಸಿದ್ದಾರೆ.
ಏನಿದು ಆರೋಪ?
ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಯಕ್ರಮದಲ್ಲಿ ತುಳುನಾಡ ದೈವಗಳ ವೇಷಹಾಕಿ ಅಶ್ಲೀಲ ನೃತ್ಯ ಮಾಡಲಾಗುತ್ತಿದೆ. ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ ಮಾಡಲಾಗುತ್ತಿದೆ. ಕೆಲವು ಕಿಡಿಗೇಡಿಗಳು ಹಣ ಸಂಪಾದನೆಗೆ ದೈವಗಳ ವೇಷತೊಡುತ್ತಿದ್ದಾರೆ. ಇದರಿಂದ ಪಂಬದ, ಪರವ, ನಲಿಕೆ ಸಮುದಾಯದವರಿಗೆ ಅವಮಾನವಾಗುತ್ತಿದೆ ಎಂದು ದೈವ ಪಾತ್ರಿಗಳು ದಯಾನಂದ ಕತ್ತಲ್ಸಾರ್ ಹೇಳಿದ್ದಾರೆ.
ಇನ್ನು ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿಯೂ ದಯಾನಂದ ಕತ್ತಲ್ಸಾರ್ ಎಚ್ಚರಿಕೆ ಹಾಕಿದ್ದಾರೆ. ಜೊತೆಗೆ ಅಪಚಾರದ ಬಗ್ಗೆ ಧ್ವನಿ ಎತ್ತುವಂತೆ ನಟ ರಿಷಭ್ ಶೆಟ್ಟಿಗೆ ಒತ್ತಾಯ ಹೇರಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೂ ಆಗ್ರಹಿಸಿದ್ದಾರೆ. ಕ್ರಮಕೈಗೊಳ್ಳದಿದ್ದರೆ ದೈವಾರಾಧಕರಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ವರಿಕೆಯನ್ನು ರವಾನಿಸಿದ್ದಾರೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…