ತುಳುನಾಡಿನ ದೈವಗಳಿಗೆ ಭಾರೀ ಅವಮಾನವಾಗುತ್ತಿದೆ. ಮನರಂಜನೆಗಾಗಿ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂದು ತುಳುನಾಡಿನ ದೈವ ಪಾತ್ರಿಗಳು ಮತ್ತು ದೈವಾರಾಧಕರು ಭಾರೀ ಆಕ್ರೋಶ ಹೊರಹಾಕಿದ್ದಾರೆ.
ತುಳುನಾಡಿನ ದೈವಗಳಂತೆ ವೇಷತೊಟ್ಟು ಅಪಮಾನ ಮಾಡಲಾಗುತ್ತಿದೆ. ಹಣ ಸಂಪಾದನೆಗೆ ದೈವಗಳ ವೇಷ ತೊಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇತರ ಭಾಗಗಳಲ್ಲಿ ದಂಧೆ ಶುರುವಾಗಿದೆ ಎಂದು ತುಳುನಾಡ ದೈವ ಪಾತ್ರಿ ದಯಾನಂದ ಕತ್ತಲ್ಸಾರ್ ಆರೋಪಿಸಿದ್ದಾರೆ.
ಏನಿದು ಆರೋಪ?
ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಯಕ್ರಮದಲ್ಲಿ ತುಳುನಾಡ ದೈವಗಳ ವೇಷಹಾಕಿ ಅಶ್ಲೀಲ ನೃತ್ಯ ಮಾಡಲಾಗುತ್ತಿದೆ. ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ ಮಾಡಲಾಗುತ್ತಿದೆ. ಕೆಲವು ಕಿಡಿಗೇಡಿಗಳು ಹಣ ಸಂಪಾದನೆಗೆ ದೈವಗಳ ವೇಷತೊಡುತ್ತಿದ್ದಾರೆ. ಇದರಿಂದ ಪಂಬದ, ಪರವ, ನಲಿಕೆ ಸಮುದಾಯದವರಿಗೆ ಅವಮಾನವಾಗುತ್ತಿದೆ ಎಂದು ದೈವ ಪಾತ್ರಿಗಳು ದಯಾನಂದ ಕತ್ತಲ್ಸಾರ್ ಹೇಳಿದ್ದಾರೆ.
ಇನ್ನು ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿಯೂ ದಯಾನಂದ ಕತ್ತಲ್ಸಾರ್ ಎಚ್ಚರಿಕೆ ಹಾಕಿದ್ದಾರೆ. ಜೊತೆಗೆ ಅಪಚಾರದ ಬಗ್ಗೆ ಧ್ವನಿ ಎತ್ತುವಂತೆ ನಟ ರಿಷಭ್ ಶೆಟ್ಟಿಗೆ ಒತ್ತಾಯ ಹೇರಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೂ ಆಗ್ರಹಿಸಿದ್ದಾರೆ. ಕ್ರಮಕೈಗೊಳ್ಳದಿದ್ದರೆ ದೈವಾರಾಧಕರಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ವರಿಕೆಯನ್ನು ರವಾನಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…