ಪುತ್ತೂರು:ವಿಕಲಚೇತನರಿಗೆ ಸರಕಾರದ ಹಲವು ಯೋಜನೆಗಳು ಸಹಿತ ವೇತನ, ಪ್ರಯಾಣ ಭತ್ಯೆ ಮುಂತಾದ ಸವಲತ್ತುಗಳು ಸಿಗಬೇಕು ಎಂದು ಒತ್ತಾಯಿಸಿ,

ಡಿ. 7ರಂದು ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದ್ದು, ಹಕ್ಕೊತ್ತಾಯ ಮಂಡಿಸಲಿದ್ದೇವೆ ಎಂದು ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಅಧ್ಯಕ್ಷ ಜೋನ್ ಬ್ಯಾಪ್ಟಿಸ್ಟ್ ಡಿ’ಸೋಜಾ ಮತ್ತು ಒಕ್ಕೂಟದ ರಾಜ್ಯ ನಿರ್ದೇಶಕ ಪ್ರವೀಣ್ ನಾಯಕ್ ಹೇಳಿದ್ದಾರೆ.
ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ವಿಕಲಚೇತನ ವಿವಿಧೋದ್ದೇಶ ಸಂಘ, ನಗರ ಹಾಗೂ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟ ರಾಜ್ಯ ಕಮಿಟಿಯ ನಿರ್ದೇಶನದಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳೆದ 15 ವರ್ಷಗಳಿಂದ ವಿಕಲಚೇತನರಾದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಾ ಬಂದಿದ್ದರೂ ನಮ್ಮ ಮನವಿಗೆ ಯಾವುದೇ ಸರಕಾರ ಸ್ಪಂದಿಸುತ್ತಿಲ್ಲ. ಸಮಾಜದ ಕಟ್ಟ ಕಡೆಯ ವಿಕಲಚೇತನರು ಕಳೆದ ಹಲವಾರು ವರ್ಷಗಳಿಂದ ವಿಕಲಚೇತನರ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಸರಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತಾ ಬಂದಿದ್ದೇವೆ ಎಂದರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಖಜಾಂಚಿ ಮುತ್ತಪ್ಪ ಪೆರಾಬೆ, ಸದಸ್ಯೆರಾದ ಸಹನ ಆರ್, ಶರ್ಮಿಳಾ ಉಪಸ್ಥಿತರಿದ್ದರು.



