ಪುತ್ತೂರು:ವಿಕಲಚೇತನರಿಗೆ ಸರಕಾರದ ಹಲವು ಯೋಜನೆಗಳು ಸಹಿತ ವೇತನ, ಪ್ರಯಾಣ ಭತ್ಯೆ ಮುಂತಾದ ಸವಲತ್ತುಗಳು ಸಿಗಬೇಕು ಎಂದು ಒತ್ತಾಯಿಸಿ,
ಡಿ. 7ರಂದು ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದ್ದು, ಹಕ್ಕೊತ್ತಾಯ ಮಂಡಿಸಲಿದ್ದೇವೆ ಎಂದು ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಅಧ್ಯಕ್ಷ ಜೋನ್ ಬ್ಯಾಪ್ಟಿಸ್ಟ್ ಡಿ’ಸೋಜಾ ಮತ್ತು ಒಕ್ಕೂಟದ ರಾಜ್ಯ ನಿರ್ದೇಶಕ ಪ್ರವೀಣ್ ನಾಯಕ್ ಹೇಳಿದ್ದಾರೆ.
ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ವಿಕಲಚೇತನ ವಿವಿಧೋದ್ದೇಶ ಸಂಘ, ನಗರ ಹಾಗೂ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟ ರಾಜ್ಯ ಕಮಿಟಿಯ ನಿರ್ದೇಶನದಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳೆದ 15 ವರ್ಷಗಳಿಂದ ವಿಕಲಚೇತನರಾದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಾ ಬಂದಿದ್ದರೂ ನಮ್ಮ ಮನವಿಗೆ ಯಾವುದೇ ಸರಕಾರ ಸ್ಪಂದಿಸುತ್ತಿಲ್ಲ. ಸಮಾಜದ ಕಟ್ಟ ಕಡೆಯ ವಿಕಲಚೇತನರು ಕಳೆದ ಹಲವಾರು ವರ್ಷಗಳಿಂದ ವಿಕಲಚೇತನರ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಸರಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತಾ ಬಂದಿದ್ದೇವೆ ಎಂದರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಖಜಾಂಚಿ ಮುತ್ತಪ್ಪ ಪೆರಾಬೆ, ಸದಸ್ಯೆರಾದ ಸಹನ ಆರ್, ಶರ್ಮಿಳಾ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…