ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾದ ಘಟನೆ ಆನೇಕಲ್ ಪಟ್ಟಣ ಸಮೀಪದ ನಾರಾಯಣಪುರದಲ್ಲಿ ನಡೆದಿದೆ.
ಸುರೇಶ್ (35) ಕೊಲೆಯಾದ ವ್ಯಕ್ತಿ. ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದನಂತೆ. ಅದೇ ರೀತಿ ನಿನ್ನೆ ಕುಡಿದು ಬಂದು ಗಲಾಟೆ ಮಾಡಿದ್ದ. ತಾಯಿಯನ್ನು ಹಿಡಿದು ಹೊಡೆಯುತ್ತಿದ್ದನಂತೆ.
ಇದನ್ನು ನೋಡಿ ತಂದೆ ಯಲ್ಲಪ್ಪ, ಗಲಾಟೆ ಬಿಡಿಸಲು ಬಂದಿದ್ದಾನೆ. ಆಗ ಯಲ್ಲಪ್ಪನ ಮೇಲೂ ಹಲ್ಲೆ ಮಾಡಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಸುರೇಶ್ ಕುತ್ತಿಗೆಗೆ ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಸುರೇಶ್ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಪೊಲೀಸರು ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದಾರೆ. ಕೇಸ್ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…