ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಅಗಲಿದ ಗಜರಾಜ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ, ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.
ಮೌನ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರಣ್ಯ ಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರಿಯರು ಹಾಗು ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ನಿತ್ಯಾನಂದ ಒಳಕಾಡು ರವರು, ವಿಶ್ವಪ್ರಸಿದ್ಧ ಮೈಸೂರು ದಸರೆಯಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆಯು, ಸಕಲೇಶಪುರದ ಯಸಳೂರಿನಲ್ಲಿ ಕಾಡನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ ರಾಜ ಗಾಂಭೀರ್ಯ ನಡಿಗೆಯ ಅರ್ಜುನನ ಅಗಲಿಕೆ ಕೋಟ್ಯಾಂತರ ಪ್ರಾಣಿ ಪ್ರೇಮಿಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.
ಇನ್ನು ಈ ಸಂದರ್ಭ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ ರಾಜ್, ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…