ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಅಗಲಿದ ಗಜರಾಜ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ, ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.
ಮೌನ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರಣ್ಯ ಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರಿಯರು ಹಾಗು ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ನಿತ್ಯಾನಂದ ಒಳಕಾಡು ರವರು, ವಿಶ್ವಪ್ರಸಿದ್ಧ ಮೈಸೂರು ದಸರೆಯಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆಯು, ಸಕಲೇಶಪುರದ ಯಸಳೂರಿನಲ್ಲಿ ಕಾಡನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ ರಾಜ ಗಾಂಭೀರ್ಯ ನಡಿಗೆಯ ಅರ್ಜುನನ ಅಗಲಿಕೆ ಕೋಟ್ಯಾಂತರ ಪ್ರಾಣಿ ಪ್ರೇಮಿಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.
ಇನ್ನು ಈ ಸಂದರ್ಭ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ ರಾಜ್, ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…