ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಅಗಲಿದ ಗಜರಾಜ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ, ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.
ಮೌನ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರಣ್ಯ ಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರಿಯರು ಹಾಗು ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ನಿತ್ಯಾನಂದ ಒಳಕಾಡು ರವರು, ವಿಶ್ವಪ್ರಸಿದ್ಧ ಮೈಸೂರು ದಸರೆಯಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆಯು, ಸಕಲೇಶಪುರದ ಯಸಳೂರಿನಲ್ಲಿ ಕಾಡನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ ರಾಜ ಗಾಂಭೀರ್ಯ ನಡಿಗೆಯ ಅರ್ಜುನನ ಅಗಲಿಕೆ ಕೋಟ್ಯಾಂತರ ಪ್ರಾಣಿ ಪ್ರೇಮಿಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.
ಇನ್ನು ಈ ಸಂದರ್ಭ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ ರಾಜ್, ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…