ಜನ ಮನದ ನಾಡಿ ಮಿಡಿತ

Advertisement

ಚಿಟ್ಟೆಗಳಿಂದ ಕೃಷಿಗೆ ಯಾವುದೇ ಹಾನಿ ಇಲ್ಲ: ಡಾ. ಎಂ. ಕೆ. ನಾಯ್ಕ್

ಉಡುಪಿ:ಪರಿಸರ ಸಮತೋಲನದಲ್ಲಿ ಚಿಟ್ಟೆಗಳ ಪಾತ್ರ ಮಹತ್ತರವಾದುದು ಎಂದು ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಂ. ಕೆ. ನಾಯ್ಕ್ ಹೇಳಿದ್ದಾರೆ.

ಉಡುಪಿಯ ಎಂಜಿಎO ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗ ಮತ್ತು ಐಕ್ಯೂ.ಎಸಿ ಜಂಟಿ ಆಶ್ರಯದಲ್ಲಿ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ, ಕಾಲೇಜಿನ ಸವಿತಾ ಶಾಸ್ತ್ರೀ ಚಿಟ್ಟೆ ಪಾರ್ಕ್ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.


ಚಿಟ್ಟೆಗಳ ಜೀವಿತಾವಧಿ ಕೆಲವೇ ದಿನಗಳಾಗಿದ್ದರೂ ಹಸಿರು ಪರಿಸರದಲ್ಲಿ ತನ್ನ ಪಾತ್ರವನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತವೆ. ಕೃಷಿಗೆ ಇತರೆ ಕೀಟಗಳಿಂದ ತೊಂದರೆ ಆದರೂ ಚಿಟ್ಟೆಗಳಿಂದ ಯಾವುದೇ ಹಾನಿಯಾಗುವುದಿಲ್ಲ. ಆದರೆ ಕೃಷಿ ಬೆಳೆಗಳಿಗೆ ಸಿಂಪಡಿಸುವ ಕೀಟ ನಾಶಕ, ರಾಸಾಯನಿಕ ಚಿಟ್ಟೆಗಳ ಸಂತತಿಗೆ ಮಾರಕವಾಗಿದೆ. ಮಾಲಿನ್ಯ ಮುಕ್ತ ಪರಿಸರ ನಿರ್ಮಾಣಕ್ಕೆ ಚಿಟ್ಟೆ ಪಾರ್ಕ್ ಗಳು ಅವಶ್ಯಕ. ಕರಾವಳಿ ಪರಿಸರಕ್ಕೆ ಚಿಟ್ಟೆ ಪಾರ್ಕ್ ನಿರ್ಮಾಣ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿರುವ ಕಡಿಮೆ ಜಾಗದಲ್ಲಿಯೂ ಚಿಟ್ಟೆ ಪಾರ್ಕ್ ನಿರ್ಮಿಸಿ, ಆರೋಗ್ಯಕರ ಪರಿಸರ ವ್ಯವಸ್ಥೆ ರೂಪಿಸಲು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ತರಂಗ ವಾರಪತ್ರಿಕೆಯ ವ್ಯಪಸ್ಥಾಪಕ ಸಂಪಾದಕಿ ಡಾ. ಸಂಧ್ಯಾ ಎಸ್. ಪೈ, ಎಂಜಿಎA ಕಾಲೇಜ್ ಟ್ರಸ್ಟ್ ನ ಅಧ್ಯಕ್ಷ ಟಿ. ಸತೀಶ್ ಯು. ಪೈ, ಮಣಿಪಾಲ ಇಸಾ ಟೆಕ್ನಾಲಜಿ ಪ್ರೈ.ಲಿ. ನಿರ್ದೇಶಕ ಡಾ. ಪ್ರಭಾಕರ್ ಶಾಸ್ತ್ರಿ , ಎಂಜಿಎO ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ದೇವಿದಾಸ್ ನಾಯಕ್, ಎಂಜಿಎO ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ, ಬೆಳ್ವಾಯಿ ಚಿಟ್ಟೆ ಪಾರ್ಕ್ನ ಸಮ್ಮಿಲನ್ ಶೆಟ್ಟಿ ಸೇರಿದಂತೆ ಹಲವಾರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!