ಮಂಗಳೂರು: ಯುಕೊ ಬ್ಯಾಂಕ್ನ ಖಾತೆಗಳಲ್ಲಿ 820 ಕೋಟಿ ರೂಪಾಯಿ ಮೌಲ್ಯದ ಐಎಂಪಿಎಸ್ ವ್ಯವಹಾರ ಅಕ್ರಮವಾಗಿ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಿದೆ.
ಕೋಲ್ಕತಾ ಮತ್ತು ಮಂಗಳೂರು ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಆರೋಪಿಗಳು ಮತ್ತು ಖಾಸಗಿ ವ್ಯಕ್ತಿ ಗಳು/ಬ್ಯಾಂಕ್ ಅಧಿಕಾರಿಗಳು ಸೇರಿ ದಂತೆ ಸಂಸ್ಥೆ ವಿಚಾರಣೆ, ಶೋಧ ನಡೆಸಿದೆ ಎಂದು ಸಿಬಿಐ ಪ್ರಕಟನೆ ತಿಳಿಸಿದೆ.
ಹುಡುಕಾಟದ ಸಮಯದಲ್ಲಿ, ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ಗ್ಳು, ಕಂಪ್ಯೂಟರ್ ಸಿಸ್ಟಮ್ಗಳು, ಇಮೇಲ್ ಆಕ್ರೈವ್ಗಳು ಮತ್ತು ಡೆಬಿಟ್/ಕ್ರೆಡಿಟ್ ಕಾರ್ಡ್ಗಳು ಸೇರಿದಂತೆ ಎಲೆಕ್ಟ್ರಾನಿಕ್ ಪುರಾವೆಗಳನ್ನು ಪಡೆಯಲಾಗಿದೆ.
ಯುಕೋ ಬ್ಯಾಂಕ್ನಿಂದ ಬಂದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ.
ಈ ಬ್ಯಾಂಕ್ನ ಇಬ್ಬರು ಸಹಾಯಕ ಎಂಜಿನಿಯರ್ಗಳು ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಅನುಮಾನಾಸ್ಪದ ತತ್ಕ್ಷಣದ ಪಾವತಿ ಸೇವೆ (ಐಎಂಪಿಎಸ್) ವಹಿವಾಟಿನ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ನ. 10 ಹಾಗೂ 13ರ ಮಧ್ಯೆ 820 ಕೋಟಿ ರೂ. ಮೊತ್ತವನ್ನು ಏಳು ಖಾಸಗಿ ಬ್ಯಾಂಕ್ಗಳ 14,000 ಖಾತೆದಾರರಿಂದ ಐಎಂಪಿಎಸ್ ಆಂತರಿಕ ವಹಿವಾಟುಗಳ ಮೂಲಕ ಯುಕೋ ಬ್ಯಾಂಕ್ನ 41,000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.
ಅಚಾನಕ್ ಆಗಿ ಖಾತೆಗೆ ಹಣ ಬಿದ್ದ ಕೂಡಲೇ ಕೆಲವರು ವಿತ್ಡ್ರಾ ಕೂಡ ಮಾಡಿಕೊಂಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…