ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ.
ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ದುರ್ಘಟನೆಯಲ್ಲಿ ಮೃತಪಟ್ಟ ಯುವಕ.
ಪ್ರದೀಪ್ ಅವರು ತನ್ನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಬೈಕ್ ನಲ್ಲಿ ಮೂಡುಬಿದಿರೆಯಿಂದ ಗಂಟಲ್ ಕಟ್ಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳ್ತಂಗಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಕಲ್ಲಬೆಟ್ಟು ಬಳಿ ಢಿಕ್ಕಿ ಹೊಡೆದಿದೆ. ಆಗ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಪ್ರದೀಪ್ ಅವರ ತಲೆಗೆ ತೀವೃ ತರಹದ ಗಾಯವಾಗಿದ್ದು ಸ್ಥಳದಲ್ಲೇ ಆಸು ನೀಗಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಮೃತ ಪ್ರದೀಪ್ ಅವರು ಇಂದು ತನ್ನ 39 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವವರಿದ್ದರು. ಆದರೆ ವಿಧಿ ಇದಕ್ಕೆ ಅವಕಾಶವನ್ನು ನೀಡದೆ ಹಿಂದಿನ ದಿನವೇ ತನ್ನತ್ತ ಬರಮಾಡಿಕೊಂಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…