ಬಂಟ್ವಾಳ: ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೆದು ಮಂದಿಯ ಗುಂಪು ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಘಟನೆ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಮುಂಜಾನೆ ನಡೆದಿದೆ.
ಈ ಬಗ್ಗೆ ಮಂಗಳೂರು ತಾಲೂಕು ಬಳ್ಳಾಲಭಾಗ್ ಶಿರ್ವ ವಿಸ್ತಾ ಅಪಾರ್ಟ್ ಮೆಂಟ್ ನಿವಾಸಿ ಎಂ ಚಂದ್ರ ಶೆಟ್ಟಿ (64) ಅವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ತನ್ನ ಹೆಂಡತಿಗೆ ಸಂಬಂದಿಸಿದ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿರುವ ಮನೆಗೆ ಬುಧವಾರ ಬೆಳಗಿನ ಜಾವ ಸುಮಾರು 2 ಗಂಟೆಗೆ ಬಿ ಮೂಡ ನಿವಾಸಿ, ಆರೋಪಿ ಸುಮಿತ್ ಆಳ್ವ (45) ಎಂಬಾತ ತನ್ನ 4 ಮಂದಿ ಸಹಚರರ ಜೊತೆ ಸೇರಿ ಮಹೇಂದ್ರ ಎಕ್ಸ್ ಯು ವಿ 500 ವಾಹನದಲ್ಲಿ ಬಂದು, ಮನೆಯ ಎದುರುಗಡೆ ಅಳವಡಿಸಿದ ಕಬ್ಬಿಣ ಗೇಟ್ ಮುರಿದು ಮನೆಯಂಗಳಕ್ಕೆ ಬಂದು ಮನೆಯ ಮುಂಭಾಗಕ್ಕೆ ಪೆಟ್ರೋಲ್ ಎರಚಿ ಬೆಂಕಿ ಹೆಚ್ಚಿರುತ್ತಾರೆ. ಪರಿಣಾಮ ಮನೆಯ ಮುಂಬಾಗಿಲು ಸುಟ್ಟು ಹೋಗಿದ್ದು, ಹೊರಾಂಗಣದಲ್ಲಿದ್ದ ಕುರ್ಚಿ ಸಂಪೂರ್ಣ ಸುಟ್ಟು ಹೋಗಿರುತ್ತದೆ.
ಘಟನೆಯ ಬಗ್ಗೆ ಇದೇ ಮನೆಯಲ್ಲಿ ಬಾಡಿಗೆ ವಾಸವಿರುವ ಪ್ರದೀಪ ಹಾಗೂ ಮನ್ಸೂರ್ ಎಂಬವರು ಮನೆಯ ಒಳಗಿನಿಂದ ಗಮನಿಸಿ, ಬೊಬ್ಬೆ ಹೊಡೆದು, ಚಂದ್ರ ಶೆಟ್ಟಿ ಅವರಿಗೆ ಕರೆ ಮಾಡಿ ತಿಳಿಸಿದಂತೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಕ್ರಮ 143/2023 147, 448, 427, 436, 511 307 0 143, 3 149 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…