ಬಂಟ್ವಾಳ: ಖಾಸಗಿ ಜಮೀನಿಗೆ ಮೂವರು ಅಕ್ರಮ ಪ್ರವೇಶ ಮಾಡಿ ಭೂಮಿ ಸ್ವಾಧೀನಪಡಿಸಲು ಯತ್ನಿಸಿದ್ದಲ್ಲದೆ ಜೀವಬೆದರಿಕೆ ಒಡ್ಡಿರುವ ಘಟನೆ ಕೊಡಂಬೆಟ್ಟು ಗ್ರಾಮದಲ್ಲಿ ನಡೆದಿದ್ದು, ನ್ಯಾಯಾಲಯದ ಅನುಮತಿಯಂತೆ ಬುಧವಾರ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಂಜಾಲಕಟ್ಟೆ ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಕಕ್ಕಿಬೆಟ್ಟು ನಿವಾಸಿ ಕರುಣಾಕರ ಶೆಟ್ಟಿ ಅವರ ಅವರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನು ಒತ್ತುವರಿಗೆ ಪ್ರಯತ್ನಿಸಲಾಗಿತ್ತು.
ಕರುಣಾಕರ ಶೆಟ್ಟಿ ಅವರ ಬಂಟ್ವಾಳ ತಾಲೂಕು ಕೊಡಂಬೆಟ್ಟು ಗ್ರಾಮದ ಕಕ್ಕಿಬೆಟ್ಟು ಎಂಬಲ್ಲಿರುವ ಜಮೀನಿಗೆ ಆರೋಪಿಗಳಾದ ಸಿಪ್ರಿಯನ್ ಕೊಡ್ಡರೋ, ಲೂಯಿಸ್ ಕೊಡ್ಡೆರೋ ಹಾಗೂ ಮೈಕಲ್ ಕೊಡ್ಡರೋ ಎಂಬವರು ಅಕ್ರಮ ಪ್ರವೇಶ ಮಾಡಿ ಭೂಮಿಯನ್ನು ಸ್ವಾಧೀನಪಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಕರುಣಾಕರ ಶೆಟ್ಟಿ ಆಕ್ಷೇಪಿಸಿದ್ದು, ಈ ಸಂದರ್ಭ ಆರೋಪಿತರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಲು ಬಂದಿರುವುದಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಯೇ ಸಿದ್ದ ಹಾಗೂ ಈ ಬಗ್ಗೆ ಆಕ್ಷೇಪಿಸಿದರೆ ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ನೀಡಿದ ದೂರಿನಂತೆ ನ್ಯಾಯಾಲಯದ ಅನುಮತಿಯಂತೆ ಬುಧವಾರ ಪೂಂಜಾಲಕಟ್ಟೆ ಠಾಣೆಯಲ್ಲಿ ಅಪರಾಧ ៩ 106/2023 0 504, 506 3 34 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…