ಬಂಟ್ವಾಳ: ಖಾಸಗಿ ಜಮೀನಿಗೆ ಮೂವರು ಅಕ್ರಮ ಪ್ರವೇಶ ಮಾಡಿ ಭೂಮಿ ಸ್ವಾಧೀನಪಡಿಸಲು ಯತ್ನಿಸಿದ್ದಲ್ಲದೆ ಜೀವಬೆದರಿಕೆ ಒಡ್ಡಿರುವ ಘಟನೆ ಕೊಡಂಬೆಟ್ಟು ಗ್ರಾಮದಲ್ಲಿ ನಡೆದಿದ್ದು, ನ್ಯಾಯಾಲಯದ ಅನುಮತಿಯಂತೆ ಬುಧವಾರ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಂಜಾಲಕಟ್ಟೆ ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಕಕ್ಕಿಬೆಟ್ಟು ನಿವಾಸಿ ಕರುಣಾಕರ ಶೆಟ್ಟಿ ಅವರ ಅವರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನು ಒತ್ತುವರಿಗೆ ಪ್ರಯತ್ನಿಸಲಾಗಿತ್ತು.
ಕರುಣಾಕರ ಶೆಟ್ಟಿ ಅವರ ಬಂಟ್ವಾಳ ತಾಲೂಕು ಕೊಡಂಬೆಟ್ಟು ಗ್ರಾಮದ ಕಕ್ಕಿಬೆಟ್ಟು ಎಂಬಲ್ಲಿರುವ ಜಮೀನಿಗೆ ಆರೋಪಿಗಳಾದ ಸಿಪ್ರಿಯನ್ ಕೊಡ್ಡರೋ, ಲೂಯಿಸ್ ಕೊಡ್ಡೆರೋ ಹಾಗೂ ಮೈಕಲ್ ಕೊಡ್ಡರೋ ಎಂಬವರು ಅಕ್ರಮ ಪ್ರವೇಶ ಮಾಡಿ ಭೂಮಿಯನ್ನು ಸ್ವಾಧೀನಪಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಕರುಣಾಕರ ಶೆಟ್ಟಿ ಆಕ್ಷೇಪಿಸಿದ್ದು, ಈ ಸಂದರ್ಭ ಆರೋಪಿತರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಲು ಬಂದಿರುವುದಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಯೇ ಸಿದ್ದ ಹಾಗೂ ಈ ಬಗ್ಗೆ ಆಕ್ಷೇಪಿಸಿದರೆ ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ನೀಡಿದ ದೂರಿನಂತೆ ನ್ಯಾಯಾಲಯದ ಅನುಮತಿಯಂತೆ ಬುಧವಾರ ಪೂಂಜಾಲಕಟ್ಟೆ ಠಾಣೆಯಲ್ಲಿ ಅಪರಾಧ ៩ 106/2023 0 504, 506 3 34 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…