ಮುಲ್ಕಿ: ಇತಿಹಾಸ ಪ್ರಸಿದ್ಧ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಶಿಮಂತೂರು ಪರೆಂಕಿಲ ದಿ. ವೇ.ಮೂ. ವಾಸುದೇವ ಭಟ್ ರವರ 30ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉಡುಪಿ ಅದಮಾರು ಮಠದ ಶ್ರೀ ವಿಶ್ವ ಪ್ರಿಯತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದಿ. ವಾಸುದೇವ ಭಟ್ಟರು ಶ್ರಮಜೀವಿಯಾಗಿದ್ದು ಅಪಾರ ದೈವ ಭಕ್ತಿಯನ್ನು ಹೊಂದಿದ್ದರು. ಮಾತು ಹರಿತವಾದರೂ ಜನರಿಗೆ ಹಿತವಾದ ನುಡಿಗಳನ್ನು ನೀಡುತ್ತಾ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸುತ್ತಿದ್ದರು. ದೇವಸ್ಥಾನದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹಿರಿಯರ ಆದರ್ಶ ಯುವಕರಿಗೆ ಪ್ರೇರಣೆಯಾಗಿದ್ದು ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿ ಕಲಿಸಿಕೊಡುವ ಕೆಲಸವಾಗಬೇಕು ಎಂದರು.ವೇದಿಕೆಯಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ, ವೇ. ಮೂ. ಸುಬ್ರಹ್ಮಣ್ಯ ಭಟ್ ತೋಕೂರು, ವಿಠಲ ಭಟ್ ಪರೆಂಕಿಲ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀಪತಿ ಭಟ್ ಪರೆಂಕಿಲ ರವರನ್ನು ಸ್ವಾಮೀಜಿಯವರು ಕ್ಷೇತ್ರದ ವತಿಯಿಂದ ಗೌರವಿಸಿದರುರಾಜೇಶ್ವರಿ ಭಟ್ ನಿರೂಪಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…