ಮುಲ್ಕಿ: ಇತಿಹಾಸ ಪ್ರಸಿದ್ಧ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಶಿಮಂತೂರು ಪರೆಂಕಿಲ ದಿ. ವೇ.ಮೂ. ವಾಸುದೇವ ಭಟ್ ರವರ 30ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉಡುಪಿ ಅದಮಾರು ಮಠದ ಶ್ರೀ ವಿಶ್ವ ಪ್ರಿಯತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದಿ. ವಾಸುದೇವ ಭಟ್ಟರು ಶ್ರಮಜೀವಿಯಾಗಿದ್ದು ಅಪಾರ ದೈವ ಭಕ್ತಿಯನ್ನು ಹೊಂದಿದ್ದರು. ಮಾತು ಹರಿತವಾದರೂ ಜನರಿಗೆ ಹಿತವಾದ ನುಡಿಗಳನ್ನು ನೀಡುತ್ತಾ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸುತ್ತಿದ್ದರು. ದೇವಸ್ಥಾನದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹಿರಿಯರ ಆದರ್ಶ ಯುವಕರಿಗೆ ಪ್ರೇರಣೆಯಾಗಿದ್ದು ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿ ಕಲಿಸಿಕೊಡುವ ಕೆಲಸವಾಗಬೇಕು ಎಂದರು.ವೇದಿಕೆಯಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ, ವೇ. ಮೂ. ಸುಬ್ರಹ್ಮಣ್ಯ ಭಟ್ ತೋಕೂರು, ವಿಠಲ ಭಟ್ ಪರೆಂಕಿಲ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀಪತಿ ಭಟ್ ಪರೆಂಕಿಲ ರವರನ್ನು ಸ್ವಾಮೀಜಿಯವರು ಕ್ಷೇತ್ರದ ವತಿಯಿಂದ ಗೌರವಿಸಿದರುರಾಜೇಶ್ವರಿ ಭಟ್ ನಿರೂಪಿಸಿದರು.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…