ಕರಾವಳಿ

ಲಕ್ಷದೀಪೋತ್ಸವಕ್ಕೆ ಸಜ್ಜುಗೊಂಡ ಧರ್ಮಸ್ಥಳ

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ 8ರಿಂದ 12ರ ವರೆಗೆ ನಡೆಯಲಿರುವ ಲಕ್ಷದೀಪೋತ್ಸವದ ಮೆರುಗಿನ ತಯಾರಿ ಪೂರ್ಣಗೊಂಡಿದ್ದು, ಭಕ್ತರ ಸ್ವಾಗತಕ್ಕೆ ಅಣಿಯಾಗಿದೆ. ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ಇದರೊಂದಿಗೆ ರಾಜ್ಯಮಟ್ಟದ ವಸ್ತುಪ್ರದರ್ಶನ ನೆರವೇರಲಿದೆ.

ದೇವರಿಗೆ ಸ್ವರ್ಣ ಪಲ್ಲಕಿ, ಬೆಳ್ಳಿ ರಥೋತ್ಸವ ವಿಶೇಷ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ, ಶಿವರಾತ್ರಿ ಹಾಗೂ ಕಾಲಾವಧಿ ಜಾತ್ರೆ ನೆರವೇರಲಿದೆ. ನಗರಾಲಂಕಾರದ ಸೊಬಗು ಇರಲಿದೆ. ವಿಶೇಷ ವರ್ಣಾಲಂಕಾರ ನೇತ್ರಾವತಿ ಸ್ನಾನಘಟ್ಟ ದಿಂದ ದೇವಸ್ಥಾನದ ವರೆಗೆ ಕಾಣಬಹುದಾಗಿದೆ. ಅದಲ್ಲದೆ ಪಾರಂಪರಿಕ ಶೈಲಿಯಲ್ಲಿ ಪಥಾಕೆ, ನಿಶಾನೆ, ನಗರಾಲಂಕಾರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.

ಲಕ್ಷದೀಪೋತ್ಸವದಲ್ಲಿ ಪ್ರಮುಖ ಆಕರ್ಷಣೆ ರಾಜ್ಯಮಟ್ಟದ ವಸ್ತುಪ್ರದರ್ಶನ, ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರೌಢ ಶಾಲೆಯ ಸಂಪೂರ್ಣ ಆವರಣದಲ್ಲಿ ಸ್ಟಾಲ್‌ಗೆ ಅವಕಾಶ ಮಾಡಿಕೊಡಲಾಗಿದೆ. ಗ್ರಾಮೀಣಾಭಿವೃದ್ಧಿ, ರುಡ್‌ಸೆಟ್‌, ಸಿರಿ ಉತ್ಪನ್ನ, ವಾಹನ ಪ್ರದರ್ಶನ, ಸಾವಯವ ಕೃಷಿ ಉತ್ಪನ್ನ, ಕರಕುಶಲ ವಸ್ತು, ಯಂತ್ರ ಪರಿಕರ, ಗೃಹೋಪಯೋಗಿ ವಸ್ತುಗಳ ಮಳಿಗೆ ಸಹಿತ ತಿಂಡಿ ತಿನಿಸು ಸೇರಿದಂತೆ ನಾನಾ ಬಗೆಯ ವಸ್ತುಪ್ರದರ್ಶನ ಮಳಿಗೆ ಸಜ್ಜಾಗಿದೆ ಭಕ್ತರಿಗೆ ಮನೋರಂಜನೆಗಾಗಿ ಒಂದೆಡೆ ಮಳಿಗೆಗಳಾದರೆ ರಥಬೀದಿಯಲ್ಲಿ ಸುಮಾರು 1500 ಸಂತೆ ಅಂಗಡಿಗಳು ಇರಲಿವೆ. 2 ಲಕ್ಷಕ್ಕೂ ಅಧಿಕಮಂದಿ ಸೇರುವ ನಿರೀಕ್ಷೆಯಿದೆ. ಈಗಾಗಲೆ ರಾಜ್ಯಾದ್ಯಂತ ಎಲ್ಲೆಡೆ ಸರಕಾರಿ ಹೆಚ್ಚುವರಿ ಬಸ್‌ ಸೇವೆ, ಭಕ್ತರಿಗೆ ಊಟದ ವ್ಯವಸ್ಥೆ, ಆರೋಗ್ಯ ಸೇವೆ ಸಹಿತ ಸ್ವತ್ಛತೆಗೆ ವಿಶೇಷ ಆಧ್ಯತೆ ನೀಡಲಾಗಿದೆ.

ಡಿ. 10ರಂದು ಅಮೃತವರ್ಷಿಣಿ ಸಭಾಭವನ ದಲ್ಲಿ ಲಲಿತಕಲಾ ಗೋಷ್ಠಿಯಲ್ಲಿ ರಾತ್ರಿ 7ರಿಂದ 10.30ರವರೆಗೆ ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್‌ ಅವರಿಂದ ಗಾನ ನೃತ್ಯ ವೈವಿಧ್ಯ- ಗುರುಕಿರಣ್‌ ನೈಟ್‌ ಸಂಭ್ರಮ ನಡೆಯಲಿದೆ. ಡಿ.11 ಸರ್ವಧರ್ಮ ಅಧಿವೇಶನವನ್ನು ಖ್ಯಾತ ವಿದ್ವಾಂಸ ಬೆಂಗಳೂರಿನ ಡಾ. ಗುರುರಾಜ ಕರ್ಜಗಿ ಉದ್ಘಾಟಿಸುವರು. ಡಿ.12 ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ| ಎಸ್‌. ಸೋಮನಾಥ್‌ ಉದ್ಘಾಟಿಸುವರು.ಇಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

1 day ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

1 day ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

1 day ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

2 days ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

2 days ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

2 days ago