ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ 8ರಿಂದ 12ರ ವರೆಗೆ ನಡೆಯಲಿರುವ ಲಕ್ಷದೀಪೋತ್ಸವದ ಮೆರುಗಿನ ತಯಾರಿ ಪೂರ್ಣಗೊಂಡಿದ್ದು, ಭಕ್ತರ ಸ್ವಾಗತಕ್ಕೆ ಅಣಿಯಾಗಿದೆ. ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ಇದರೊಂದಿಗೆ ರಾಜ್ಯಮಟ್ಟದ ವಸ್ತುಪ್ರದರ್ಶನ ನೆರವೇರಲಿದೆ.
ದೇವರಿಗೆ ಸ್ವರ್ಣ ಪಲ್ಲಕಿ, ಬೆಳ್ಳಿ ರಥೋತ್ಸವ ವಿಶೇಷ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ, ಶಿವರಾತ್ರಿ ಹಾಗೂ ಕಾಲಾವಧಿ ಜಾತ್ರೆ ನೆರವೇರಲಿದೆ. ನಗರಾಲಂಕಾರದ ಸೊಬಗು ಇರಲಿದೆ. ವಿಶೇಷ ವರ್ಣಾಲಂಕಾರ ನೇತ್ರಾವತಿ ಸ್ನಾನಘಟ್ಟ ದಿಂದ ದೇವಸ್ಥಾನದ ವರೆಗೆ ಕಾಣಬಹುದಾಗಿದೆ. ಅದಲ್ಲದೆ ಪಾರಂಪರಿಕ ಶೈಲಿಯಲ್ಲಿ ಪಥಾಕೆ, ನಿಶಾನೆ, ನಗರಾಲಂಕಾರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.
ಲಕ್ಷದೀಪೋತ್ಸವದಲ್ಲಿ ಪ್ರಮುಖ ಆಕರ್ಷಣೆ ರಾಜ್ಯಮಟ್ಟದ ವಸ್ತುಪ್ರದರ್ಶನ, ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರೌಢ ಶಾಲೆಯ ಸಂಪೂರ್ಣ ಆವರಣದಲ್ಲಿ ಸ್ಟಾಲ್ಗೆ ಅವಕಾಶ ಮಾಡಿಕೊಡಲಾಗಿದೆ. ಗ್ರಾಮೀಣಾಭಿವೃದ್ಧಿ, ರುಡ್ಸೆಟ್, ಸಿರಿ ಉತ್ಪನ್ನ, ವಾಹನ ಪ್ರದರ್ಶನ, ಸಾವಯವ ಕೃಷಿ ಉತ್ಪನ್ನ, ಕರಕುಶಲ ವಸ್ತು, ಯಂತ್ರ ಪರಿಕರ, ಗೃಹೋಪಯೋಗಿ ವಸ್ತುಗಳ ಮಳಿಗೆ ಸಹಿತ ತಿಂಡಿ ತಿನಿಸು ಸೇರಿದಂತೆ ನಾನಾ ಬಗೆಯ ವಸ್ತುಪ್ರದರ್ಶನ ಮಳಿಗೆ ಸಜ್ಜಾಗಿದೆ ಭಕ್ತರಿಗೆ ಮನೋರಂಜನೆಗಾಗಿ ಒಂದೆಡೆ ಮಳಿಗೆಗಳಾದರೆ ರಥಬೀದಿಯಲ್ಲಿ ಸುಮಾರು 1500 ಸಂತೆ ಅಂಗಡಿಗಳು ಇರಲಿವೆ. 2 ಲಕ್ಷಕ್ಕೂ ಅಧಿಕಮಂದಿ ಸೇರುವ ನಿರೀಕ್ಷೆಯಿದೆ. ಈಗಾಗಲೆ ರಾಜ್ಯಾದ್ಯಂತ ಎಲ್ಲೆಡೆ ಸರಕಾರಿ ಹೆಚ್ಚುವರಿ ಬಸ್ ಸೇವೆ, ಭಕ್ತರಿಗೆ ಊಟದ ವ್ಯವಸ್ಥೆ, ಆರೋಗ್ಯ ಸೇವೆ ಸಹಿತ ಸ್ವತ್ಛತೆಗೆ ವಿಶೇಷ ಆಧ್ಯತೆ ನೀಡಲಾಗಿದೆ.
ಡಿ. 10ರಂದು ಅಮೃತವರ್ಷಿಣಿ ಸಭಾಭವನ ದಲ್ಲಿ ಲಲಿತಕಲಾ ಗೋಷ್ಠಿಯಲ್ಲಿ ರಾತ್ರಿ 7ರಿಂದ 10.30ರವರೆಗೆ ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್ ಅವರಿಂದ ಗಾನ ನೃತ್ಯ ವೈವಿಧ್ಯ- ಗುರುಕಿರಣ್ ನೈಟ್ ಸಂಭ್ರಮ ನಡೆಯಲಿದೆ. ಡಿ.11 ಸರ್ವಧರ್ಮ ಅಧಿವೇಶನವನ್ನು ಖ್ಯಾತ ವಿದ್ವಾಂಸ ಬೆಂಗಳೂರಿನ ಡಾ. ಗುರುರಾಜ ಕರ್ಜಗಿ ಉದ್ಘಾಟಿಸುವರು. ಡಿ.12 ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ| ಎಸ್. ಸೋಮನಾಥ್ ಉದ್ಘಾಟಿಸುವರು.ಇಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…