ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ 8ರಿಂದ 12ರ ವರೆಗೆ ನಡೆಯಲಿರುವ ಲಕ್ಷದೀಪೋತ್ಸವದ ಮೆರುಗಿನ ತಯಾರಿ ಪೂರ್ಣಗೊಂಡಿದ್ದು, ಭಕ್ತರ ಸ್ವಾಗತಕ್ಕೆ ಅಣಿಯಾಗಿದೆ. ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ಇದರೊಂದಿಗೆ ರಾಜ್ಯಮಟ್ಟದ ವಸ್ತುಪ್ರದರ್ಶನ ನೆರವೇರಲಿದೆ.
ದೇವರಿಗೆ ಸ್ವರ್ಣ ಪಲ್ಲಕಿ, ಬೆಳ್ಳಿ ರಥೋತ್ಸವ ವಿಶೇಷ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ, ಶಿವರಾತ್ರಿ ಹಾಗೂ ಕಾಲಾವಧಿ ಜಾತ್ರೆ ನೆರವೇರಲಿದೆ. ನಗರಾಲಂಕಾರದ ಸೊಬಗು ಇರಲಿದೆ. ವಿಶೇಷ ವರ್ಣಾಲಂಕಾರ ನೇತ್ರಾವತಿ ಸ್ನಾನಘಟ್ಟ ದಿಂದ ದೇವಸ್ಥಾನದ ವರೆಗೆ ಕಾಣಬಹುದಾಗಿದೆ. ಅದಲ್ಲದೆ ಪಾರಂಪರಿಕ ಶೈಲಿಯಲ್ಲಿ ಪಥಾಕೆ, ನಿಶಾನೆ, ನಗರಾಲಂಕಾರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.
ಲಕ್ಷದೀಪೋತ್ಸವದಲ್ಲಿ ಪ್ರಮುಖ ಆಕರ್ಷಣೆ ರಾಜ್ಯಮಟ್ಟದ ವಸ್ತುಪ್ರದರ್ಶನ, ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರೌಢ ಶಾಲೆಯ ಸಂಪೂರ್ಣ ಆವರಣದಲ್ಲಿ ಸ್ಟಾಲ್ಗೆ ಅವಕಾಶ ಮಾಡಿಕೊಡಲಾಗಿದೆ. ಗ್ರಾಮೀಣಾಭಿವೃದ್ಧಿ, ರುಡ್ಸೆಟ್, ಸಿರಿ ಉತ್ಪನ್ನ, ವಾಹನ ಪ್ರದರ್ಶನ, ಸಾವಯವ ಕೃಷಿ ಉತ್ಪನ್ನ, ಕರಕುಶಲ ವಸ್ತು, ಯಂತ್ರ ಪರಿಕರ, ಗೃಹೋಪಯೋಗಿ ವಸ್ತುಗಳ ಮಳಿಗೆ ಸಹಿತ ತಿಂಡಿ ತಿನಿಸು ಸೇರಿದಂತೆ ನಾನಾ ಬಗೆಯ ವಸ್ತುಪ್ರದರ್ಶನ ಮಳಿಗೆ ಸಜ್ಜಾಗಿದೆ ಭಕ್ತರಿಗೆ ಮನೋರಂಜನೆಗಾಗಿ ಒಂದೆಡೆ ಮಳಿಗೆಗಳಾದರೆ ರಥಬೀದಿಯಲ್ಲಿ ಸುಮಾರು 1500 ಸಂತೆ ಅಂಗಡಿಗಳು ಇರಲಿವೆ. 2 ಲಕ್ಷಕ್ಕೂ ಅಧಿಕಮಂದಿ ಸೇರುವ ನಿರೀಕ್ಷೆಯಿದೆ. ಈಗಾಗಲೆ ರಾಜ್ಯಾದ್ಯಂತ ಎಲ್ಲೆಡೆ ಸರಕಾರಿ ಹೆಚ್ಚುವರಿ ಬಸ್ ಸೇವೆ, ಭಕ್ತರಿಗೆ ಊಟದ ವ್ಯವಸ್ಥೆ, ಆರೋಗ್ಯ ಸೇವೆ ಸಹಿತ ಸ್ವತ್ಛತೆಗೆ ವಿಶೇಷ ಆಧ್ಯತೆ ನೀಡಲಾಗಿದೆ.
ಡಿ. 10ರಂದು ಅಮೃತವರ್ಷಿಣಿ ಸಭಾಭವನ ದಲ್ಲಿ ಲಲಿತಕಲಾ ಗೋಷ್ಠಿಯಲ್ಲಿ ರಾತ್ರಿ 7ರಿಂದ 10.30ರವರೆಗೆ ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್ ಅವರಿಂದ ಗಾನ ನೃತ್ಯ ವೈವಿಧ್ಯ- ಗುರುಕಿರಣ್ ನೈಟ್ ಸಂಭ್ರಮ ನಡೆಯಲಿದೆ. ಡಿ.11 ಸರ್ವಧರ್ಮ ಅಧಿವೇಶನವನ್ನು ಖ್ಯಾತ ವಿದ್ವಾಂಸ ಬೆಂಗಳೂರಿನ ಡಾ. ಗುರುರಾಜ ಕರ್ಜಗಿ ಉದ್ಘಾಟಿಸುವರು. ಡಿ.12 ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ| ಎಸ್. ಸೋಮನಾಥ್ ಉದ್ಘಾಟಿಸುವರು.ಇಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…