ಜನ ಮನದ ನಾಡಿ ಮಿಡಿತ

Advertisement

ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಕರೆ ಉತ್ಸವ

ಪುತ್ತೂರು:ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿಯ ಬಲೀಂದ್ರಪೂಜೆಯoದು ಬಲಿಹೊರಟು, ಶ್ರೀದೇವರ ವರ್ಷದ ಪ್ರಥಮ ಸವಾರಿ ಪೂಕರೆ ಉತ್ಸವವು ವೈಭವದಿಂದ ನಡೆಯಿತು.

ನಂದಿ ಮುಖವಾಡ ಧರಿಸಿದ ‘ಬಸವ’ ದೈವ’ ಶ್ರೀ ದೇವರನ್ನು ಪೂಕರೆ ಕಟ್ಟೆಗೆ ಕರೆದು ಕೊಂಡು ಬರುವುದೇ ವಿಶೇಷ. ವೇ ಮೂ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ವಿಷ್ಣುಪ್ರಸಾದ್ ತಂತ್ರಿ ಮತ್ತು ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಮೂಲ ನಾಗ ಸನ್ನಿಧಿಗೆ ತೆರಳಿ, ಪೂಕರೆ ಗದ್ದೆಗೆ ಪ್ರಾರ್ಥನೆ ಮಾಡಿದ್ದಾರೆ. ನಂತರ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಅವರು ಮೂಲನಾಗವನದಲ್ಲಿ ಪೂಜೆ ನೆರವೇರಿಸಿದ್ದಾರೆ.

ಜೋಡು ಪೂಕರೆಯನ್ನು ದೇವರಮಾರು ಗದ್ದೆ ಮತ್ತು ಬಾಕಿತಮಾರು ಗದ್ದೆಯಲ್ಲಿ ಇಟ್ಟು ಪ್ರಾರ್ಥನೆ ಮಾಡಿ, ಬಳಿಕ ಪೂಕರೆ ಕಟ್ಟೆಯಲ್ಲಿ ಶ್ರೀದೇವರಿಗೆ ದೀವಟಿಕೆ ಪ್ರಣಾಮ, ಕಟ್ಟೆಪೂಜೆ ನಡೆದು, ಬುಲೆಕಾಣಿಕೆ ಸಂಪ್ರದಾಯದoತೆ ಸೀಮಿತ ಭಕ್ತರಿಗೆ ಸೀಯಾಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಶೇಖರ್ ನಾರಾವಿ, ಡಾ. ಸುಧಾ ಎಸ್ ರಾವ್, ರಾಮ್‌ದಾಸ್ ಗೌಡ, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!