ಜನ ಮನದ ನಾಡಿ ಮಿಡಿತ

Advertisement

ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಕರೆ ಉತ್ಸವ

ಪುತ್ತೂರು:ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿಯ ಬಲೀಂದ್ರಪೂಜೆಯoದು ಬಲಿಹೊರಟು, ಶ್ರೀದೇವರ ವರ್ಷದ ಪ್ರಥಮ ಸವಾರಿ ಪೂಕರೆ ಉತ್ಸವವು ವೈಭವದಿಂದ ನಡೆಯಿತು.

ನಂದಿ ಮುಖವಾಡ ಧರಿಸಿದ ‘ಬಸವ’ ದೈವ’ ಶ್ರೀ ದೇವರನ್ನು ಪೂಕರೆ ಕಟ್ಟೆಗೆ ಕರೆದು ಕೊಂಡು ಬರುವುದೇ ವಿಶೇಷ. ವೇ ಮೂ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ವಿಷ್ಣುಪ್ರಸಾದ್ ತಂತ್ರಿ ಮತ್ತು ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಮೂಲ ನಾಗ ಸನ್ನಿಧಿಗೆ ತೆರಳಿ, ಪೂಕರೆ ಗದ್ದೆಗೆ ಪ್ರಾರ್ಥನೆ ಮಾಡಿದ್ದಾರೆ. ನಂತರ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಅವರು ಮೂಲನಾಗವನದಲ್ಲಿ ಪೂಜೆ ನೆರವೇರಿಸಿದ್ದಾರೆ.

ಜೋಡು ಪೂಕರೆಯನ್ನು ದೇವರಮಾರು ಗದ್ದೆ ಮತ್ತು ಬಾಕಿತಮಾರು ಗದ್ದೆಯಲ್ಲಿ ಇಟ್ಟು ಪ್ರಾರ್ಥನೆ ಮಾಡಿ, ಬಳಿಕ ಪೂಕರೆ ಕಟ್ಟೆಯಲ್ಲಿ ಶ್ರೀದೇವರಿಗೆ ದೀವಟಿಕೆ ಪ್ರಣಾಮ, ಕಟ್ಟೆಪೂಜೆ ನಡೆದು, ಬುಲೆಕಾಣಿಕೆ ಸಂಪ್ರದಾಯದoತೆ ಸೀಮಿತ ಭಕ್ತರಿಗೆ ಸೀಯಾಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಶೇಖರ್ ನಾರಾವಿ, ಡಾ. ಸುಧಾ ಎಸ್ ರಾವ್, ರಾಮ್‌ದಾಸ್ ಗೌಡ, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!