ಪುತ್ತೂರು:ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿಯ ಬಲೀಂದ್ರಪೂಜೆಯoದು ಬಲಿಹೊರಟು, ಶ್ರೀದೇವರ ವರ್ಷದ ಪ್ರಥಮ ಸವಾರಿ ಪೂಕರೆ ಉತ್ಸವವು ವೈಭವದಿಂದ ನಡೆಯಿತು.
ನಂದಿ ಮುಖವಾಡ ಧರಿಸಿದ ‘ಬಸವ’ ದೈವ’ ಶ್ರೀ ದೇವರನ್ನು ಪೂಕರೆ ಕಟ್ಟೆಗೆ ಕರೆದು ಕೊಂಡು ಬರುವುದೇ ವಿಶೇಷ. ವೇ ಮೂ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ವಿಷ್ಣುಪ್ರಸಾದ್ ತಂತ್ರಿ ಮತ್ತು ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಮೂಲ ನಾಗ ಸನ್ನಿಧಿಗೆ ತೆರಳಿ, ಪೂಕರೆ ಗದ್ದೆಗೆ ಪ್ರಾರ್ಥನೆ ಮಾಡಿದ್ದಾರೆ. ನಂತರ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಅವರು ಮೂಲನಾಗವನದಲ್ಲಿ ಪೂಜೆ ನೆರವೇರಿಸಿದ್ದಾರೆ.
ಜೋಡು ಪೂಕರೆಯನ್ನು ದೇವರಮಾರು ಗದ್ದೆ ಮತ್ತು ಬಾಕಿತಮಾರು ಗದ್ದೆಯಲ್ಲಿ ಇಟ್ಟು ಪ್ರಾರ್ಥನೆ ಮಾಡಿ, ಬಳಿಕ ಪೂಕರೆ ಕಟ್ಟೆಯಲ್ಲಿ ಶ್ರೀದೇವರಿಗೆ ದೀವಟಿಕೆ ಪ್ರಣಾಮ, ಕಟ್ಟೆಪೂಜೆ ನಡೆದು, ಬುಲೆಕಾಣಿಕೆ ಸಂಪ್ರದಾಯದoತೆ ಸೀಮಿತ ಭಕ್ತರಿಗೆ ಸೀಯಾಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಶೇಖರ್ ನಾರಾವಿ, ಡಾ. ಸುಧಾ ಎಸ್ ರಾವ್, ರಾಮ್ದಾಸ್ ಗೌಡ, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…