ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಗನ ಜೊತೆಯಲ್ಲಿ ಪೇಟೆಗೆ ಬಂದು ಕಾಣೆಯಾಗಿದ್ದ ವೃದ್ದರೋರ್ವರನ್ನು ಪತ್ತೆ ಹಚ್ಚಿದ ಪೋಲೀಸರು

ಬಂಟ್ವಾಳ: ಮಗನ ಜೊತೆಯಲ್ಲಿ ಪೇಟೆಗೆ ಬಂದು ಕಾಣೆಯಾಗಿದ್ದ ವೃದ್ದರೋರ್ವರನ್ನು ಪತ್ತೆ ಹಚ್ಚಿದ ಪೋಲೀಸರು ಅವರನ್ನು ಆಸ್ಪತ್ರೆಗೆ ದಾಖಲು ಪಡಿಸಿದ ಘಟನೆ ನಡೆದಿದೆ.

ಕಾವಳ ಪಡೂರು ಗ್ರಾಮದ ವಗ್ಗ ಸಮೀಪದ ಕೆಲೆಂಜಕೋಡಿ ಮಾಂಗಜೆ ನಿವಾಸಿ ಜಾನ್ ವಾಸ್ (88) ಕಾಣೆಯಾಗಿದ್ದ ವ್ಯಕ್ತಿ.ಅವರನ್ನು ಗೋರೆಮಾರ್ ಗುಡ್ಡವೊಂದರಲ್ಲಿ ಪತ್ತೆ ಹಚ್ಚಿದ ಪೋಲೀಸರು ಬಳಿಕ ಬಿಸಿರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಡಿಕೆ ಮಾರಟ ಮಾಡುವ ಉದ್ದೇಶದಿಂದ ಪೇಟೆಗೆ ಬಂದ ಮಗನ‌ಜೊತೆಗೆ ಬಂದಿದ್ದ ವೃದ್ದ ಜಾನ್ ವಾಸ್ ಅವರು ಡಿ.6 ರಂದು ಬಿಸಿರೋಡಿನ ‌ಕೈಕಂಬ ಎಂಬಲ್ಲಿಂದ ಕಾಣೆಯಾಗಿದ್ದರು.
ಹಾಗಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಇವರ ಪತ್ತೆಗಾಗಿ ಮನೆಯವರು ಪೋಲಿಸರಿಗೆ ದೂರು ನೀಡಿ ಮನವಿ ಮಾಡಿಕೊಂಡಿದ್ದರು.


ಇವರ ದೂರಿನಂತೆ ಬಂಟ್ವಾಳ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ರಾಮಕೃಷ್ಣ ಅವರ ನೇತ್ರತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ರಾಜೇಶ್ ಮತ್ತು ಇರ್ಶಾದ್ ಅವರು ಬಿಸಿರೋಡಿನ ಸುತ್ತಮುತ್ತಲು ಸ್ಚತಃ ಕಾರಿನ ಮೂಲಕ ನಿನ್ನೆಯಿಂದ ಹುಡುಕಾಟ ನಡೆಸಿ ಕೊನೆಗೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಣೆಯಾದ ಜಾನ್ ವಾಸ್ ಅವರ ಪತ್ತೆಗಾಗಿ ‌ಗುರುವಾರ ಸಂಜೆಯಿಂದ ಇವರು ನಿರಂತರವಾಗಿ ಹುಡುಕಾಟ ನಡೆಸಿದ್ದರು. ಇಂದು ಸಂಜೆ ವೇಳೆ ಗೋರೆಮಾರ್ ಗುಡ್ಡವೊಂದರಲ್ಲಿ ಇವರು ಇರುವ ಬಗ್ಗೆ ಮಾಹಿತಿ ಲಭ್ಯವಾಗಿ ಅವರನ್ನು ಕುಟುಂಬದ ಕೈಗೆ ಒಪ್ಪಿಸಿದ್ದಾರೆ.


ನಿನ್ನೆಯಿಂದ ಹೊಟ್ಟೆಗೆ ಊಟವಿಲ್ಲದೆ ಕೊಳಕು ಬಟ್ಟೆಯಲ್ಲಿದ್ದ ಜಾನ್ ವಾಸ್ ಅವರಿಗೆ ತಿನ್ನಲು ‌ಆಹಾರ ನೀಡಿ, ಬಟ್ಟೆಯನ್ನು ಬದಲಾವಣೆ ಮಾಡಿದ ಪೋಲೀಸರು ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡ ಹಿನ್ನೆಲೆಯಲ್ಲಿ ಪತ್ತೆ ಹಚ್ಚಿದ ಕೂಡಲೇ ಬಿಸಿರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ರಾಜೇಶ್ ಮತ್ತು ಇರ್ಶಾದ್ ಅವರ ಕಾರ್ಯಕ್ಕೆ ಕುಟುಂಬಸ್ಥರು ಹಾಗೂ ಸ್ಥಳೀಯರು‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!