ಬಂಟ್ವಾಳ: ಮಗನ ಜೊತೆಯಲ್ಲಿ ಪೇಟೆಗೆ ಬಂದು ಕಾಣೆಯಾಗಿದ್ದ ವೃದ್ದರೋರ್ವರನ್ನು ಪತ್ತೆ ಹಚ್ಚಿದ ಪೋಲೀಸರು ಅವರನ್ನು ಆಸ್ಪತ್ರೆಗೆ ದಾಖಲು ಪಡಿಸಿದ ಘಟನೆ ನಡೆದಿದೆ.
ಕಾವಳ ಪಡೂರು ಗ್ರಾಮದ ವಗ್ಗ ಸಮೀಪದ ಕೆಲೆಂಜಕೋಡಿ ಮಾಂಗಜೆ ನಿವಾಸಿ ಜಾನ್ ವಾಸ್ (88) ಕಾಣೆಯಾಗಿದ್ದ ವ್ಯಕ್ತಿ.ಅವರನ್ನು ಗೋರೆಮಾರ್ ಗುಡ್ಡವೊಂದರಲ್ಲಿ ಪತ್ತೆ ಹಚ್ಚಿದ ಪೋಲೀಸರು ಬಳಿಕ ಬಿಸಿರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಡಿಕೆ ಮಾರಟ ಮಾಡುವ ಉದ್ದೇಶದಿಂದ ಪೇಟೆಗೆ ಬಂದ ಮಗನಜೊತೆಗೆ ಬಂದಿದ್ದ ವೃದ್ದ ಜಾನ್ ವಾಸ್ ಅವರು ಡಿ.6 ರಂದು ಬಿಸಿರೋಡಿನ ಕೈಕಂಬ ಎಂಬಲ್ಲಿಂದ ಕಾಣೆಯಾಗಿದ್ದರು.
ಹಾಗಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಇವರ ಪತ್ತೆಗಾಗಿ ಮನೆಯವರು ಪೋಲಿಸರಿಗೆ ದೂರು ನೀಡಿ ಮನವಿ ಮಾಡಿಕೊಂಡಿದ್ದರು.
ಇವರ ದೂರಿನಂತೆ ಬಂಟ್ವಾಳ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ರಾಮಕೃಷ್ಣ ಅವರ ನೇತ್ರತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ರಾಜೇಶ್ ಮತ್ತು ಇರ್ಶಾದ್ ಅವರು ಬಿಸಿರೋಡಿನ ಸುತ್ತಮುತ್ತಲು ಸ್ಚತಃ ಕಾರಿನ ಮೂಲಕ ನಿನ್ನೆಯಿಂದ ಹುಡುಕಾಟ ನಡೆಸಿ ಕೊನೆಗೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಣೆಯಾದ ಜಾನ್ ವಾಸ್ ಅವರ ಪತ್ತೆಗಾಗಿ ಗುರುವಾರ ಸಂಜೆಯಿಂದ ಇವರು ನಿರಂತರವಾಗಿ ಹುಡುಕಾಟ ನಡೆಸಿದ್ದರು. ಇಂದು ಸಂಜೆ ವೇಳೆ ಗೋರೆಮಾರ್ ಗುಡ್ಡವೊಂದರಲ್ಲಿ ಇವರು ಇರುವ ಬಗ್ಗೆ ಮಾಹಿತಿ ಲಭ್ಯವಾಗಿ ಅವರನ್ನು ಕುಟುಂಬದ ಕೈಗೆ ಒಪ್ಪಿಸಿದ್ದಾರೆ.
ನಿನ್ನೆಯಿಂದ ಹೊಟ್ಟೆಗೆ ಊಟವಿಲ್ಲದೆ ಕೊಳಕು ಬಟ್ಟೆಯಲ್ಲಿದ್ದ ಜಾನ್ ವಾಸ್ ಅವರಿಗೆ ತಿನ್ನಲು ಆಹಾರ ನೀಡಿ, ಬಟ್ಟೆಯನ್ನು ಬದಲಾವಣೆ ಮಾಡಿದ ಪೋಲೀಸರು ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡ ಹಿನ್ನೆಲೆಯಲ್ಲಿ ಪತ್ತೆ ಹಚ್ಚಿದ ಕೂಡಲೇ ಬಿಸಿರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ರಾಜೇಶ್ ಮತ್ತು ಇರ್ಶಾದ್ ಅವರ ಕಾರ್ಯಕ್ಕೆ ಕುಟುಂಬಸ್ಥರು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…