ಬಂಟ್ವಾಳ: ಮಗನ ಜೊತೆಯಲ್ಲಿ ಪೇಟೆಗೆ ಬಂದು ಕಾಣೆಯಾಗಿದ್ದ ವೃದ್ದರೋರ್ವರನ್ನು ಪತ್ತೆ ಹಚ್ಚಿದ ಪೋಲೀಸರು ಅವರನ್ನು ಆಸ್ಪತ್ರೆಗೆ ದಾಖಲು ಪಡಿಸಿದ ಘಟನೆ ನಡೆದಿದೆ.
ಕಾವಳ ಪಡೂರು ಗ್ರಾಮದ ವಗ್ಗ ಸಮೀಪದ ಕೆಲೆಂಜಕೋಡಿ ಮಾಂಗಜೆ ನಿವಾಸಿ ಜಾನ್ ವಾಸ್ (88) ಕಾಣೆಯಾಗಿದ್ದ ವ್ಯಕ್ತಿ.ಅವರನ್ನು ಗೋರೆಮಾರ್ ಗುಡ್ಡವೊಂದರಲ್ಲಿ ಪತ್ತೆ ಹಚ್ಚಿದ ಪೋಲೀಸರು ಬಳಿಕ ಬಿಸಿರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಡಿಕೆ ಮಾರಟ ಮಾಡುವ ಉದ್ದೇಶದಿಂದ ಪೇಟೆಗೆ ಬಂದ ಮಗನಜೊತೆಗೆ ಬಂದಿದ್ದ ವೃದ್ದ ಜಾನ್ ವಾಸ್ ಅವರು ಡಿ.6 ರಂದು ಬಿಸಿರೋಡಿನ ಕೈಕಂಬ ಎಂಬಲ್ಲಿಂದ ಕಾಣೆಯಾಗಿದ್ದರು.
ಹಾಗಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಇವರ ಪತ್ತೆಗಾಗಿ ಮನೆಯವರು ಪೋಲಿಸರಿಗೆ ದೂರು ನೀಡಿ ಮನವಿ ಮಾಡಿಕೊಂಡಿದ್ದರು.
ಇವರ ದೂರಿನಂತೆ ಬಂಟ್ವಾಳ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ರಾಮಕೃಷ್ಣ ಅವರ ನೇತ್ರತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ರಾಜೇಶ್ ಮತ್ತು ಇರ್ಶಾದ್ ಅವರು ಬಿಸಿರೋಡಿನ ಸುತ್ತಮುತ್ತಲು ಸ್ಚತಃ ಕಾರಿನ ಮೂಲಕ ನಿನ್ನೆಯಿಂದ ಹುಡುಕಾಟ ನಡೆಸಿ ಕೊನೆಗೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಣೆಯಾದ ಜಾನ್ ವಾಸ್ ಅವರ ಪತ್ತೆಗಾಗಿ ಗುರುವಾರ ಸಂಜೆಯಿಂದ ಇವರು ನಿರಂತರವಾಗಿ ಹುಡುಕಾಟ ನಡೆಸಿದ್ದರು. ಇಂದು ಸಂಜೆ ವೇಳೆ ಗೋರೆಮಾರ್ ಗುಡ್ಡವೊಂದರಲ್ಲಿ ಇವರು ಇರುವ ಬಗ್ಗೆ ಮಾಹಿತಿ ಲಭ್ಯವಾಗಿ ಅವರನ್ನು ಕುಟುಂಬದ ಕೈಗೆ ಒಪ್ಪಿಸಿದ್ದಾರೆ.
ನಿನ್ನೆಯಿಂದ ಹೊಟ್ಟೆಗೆ ಊಟವಿಲ್ಲದೆ ಕೊಳಕು ಬಟ್ಟೆಯಲ್ಲಿದ್ದ ಜಾನ್ ವಾಸ್ ಅವರಿಗೆ ತಿನ್ನಲು ಆಹಾರ ನೀಡಿ, ಬಟ್ಟೆಯನ್ನು ಬದಲಾವಣೆ ಮಾಡಿದ ಪೋಲೀಸರು ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡ ಹಿನ್ನೆಲೆಯಲ್ಲಿ ಪತ್ತೆ ಹಚ್ಚಿದ ಕೂಡಲೇ ಬಿಸಿರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ರಾಜೇಶ್ ಮತ್ತು ಇರ್ಶಾದ್ ಅವರ ಕಾರ್ಯಕ್ಕೆ ಕುಟುಂಬಸ್ಥರು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…