ಬoಟ್ವಾಳ:ಬoಟ್ವಾಳ ತಾಲೂಕಿನ ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿಯವರ ಬಾಡಿಗೆ ಮನೆಯಲ್ಲಿರುವ ಬಾಡಿಗೆದಾರ ಹೊನ್ನಪ್ಪ ಗೌಡರವರ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ.

ಸೋರಿಕೆಯಾಗಿರುವುದು ತಿಳಿಯದೆ ರಾತ್ರಿ ಅಡುಗೆ ಮಾಡಲು ಗ್ಯಾಸ್ ಉರಿಸಲು ಹೋದಾಗ ದುರಂತ ನಡೆದಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.



