ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯ ಸಮಾಜ ಮಂದಿರದಲ್ಲಿ ಅಂತರಾಷ್ಟ್ರೀಯ ವಿಕಲಚೇತನರ ದಿನಾಚರಣೆ

ಮೂಡುಬಿದಿರೆ:ಸಾಮಾನ್ಯ ಮಕ್ಕಳಿಗಿರುವಂತೆ ವಿಶೇಷ ಚೇತನ ಮಕ್ಕಳಿಗೂ ಅವರದ್ದೇ ಆದ ಹಕ್ಕುಗಳಿವೆ. ಸಮಾಜದ ಒಂದು ಭಾಗವಾಗಿರುವ ಅವರ ಬಗ್ಗೆ ವಿಶೇಷವಾದ ಕಾಳಜಿಯನ್ನು ವಹಿಸಿ ಕಾನೂನಿಗೆ ಪೂರಕವಾದ ಸೌಲಭ್ಯಗಳು ಅವರಿಗೆ ಸಿಗುವಂತ್ತಾಗಬೇಕು ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿಜಿ ಹೇಳಿದ್ದಾರೆ.

ಇವರು ಅಂತರಾಷ್ಟ್ರೀಯ ವಿಕಲಚೇತನರ ದಿನಾಚರಣೆಯ ಅಂಗವಾಗಿ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ ಮೂಡುಬಿದಿರೆ ಭಿನ್ನ ಸಾಮಥ್ಯ9ವುಳ್ಳವರ ತರಬೇತಿ ಶಾಲೆಗಳು ಮತ್ತು ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ ನಡೆದ ವಿಶೇಷ ಸಾಮಥ್ಯ9ವುಳ್ಳ ಮಕ್ಕಳು, ಪೋಷಕರು ಹಾಗೂ ಶಿಕ್ಷಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ರು. ವಿಶೇಷ ಮಕ್ಕಳಲ್ಲಿ ವಿಶೇಷವಾದ ಶಕ್ತಿಯಿದೆ. ಅವರಿಗೂ ಸ್ವಾಭಿಮಾನದಿಂದ ಬದುಕಲು ಸ್ವ ಉದ್ಯೋಗದಂತಹ ಅವಕಾಶವನ್ನು ಕಲ್ಪಿಸಿ ಸಾಮಾನ್ಯರಂತೆ ಬೆಳೆಯಲು ಸಹಕಾರ ನೀಡಬೇಕೆಂದ ಅವರು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳು ಪೂರಕ ಅಂತ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ದೇವರ ಮಕ್ಕಳು ಕುಣಿದು ಕುಪ್ಪಳಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ನ ಅರ್ಜುನ್ ಭಂಡಾರ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

error: Content is protected !!