ಜನ ಮನದ ನಾಡಿ ಮಿಡಿತ

Advertisement

ಆಶಿಕ್‌ಗೆ ಒಲಿದ ‘ಮಾಸ್ಟರ್ ಶೆಫ್ ಇಂಡಿಯಾ’ ಪ್ರಶಸ್ತಿ ; ಡಿ.10 ರಂದು ತವರಿಗೆ ಆಗಮಿಸಲಿರುವ ಮೊಹಮ್ಮದ್ ಆಶಿಕ್

ಮOಗಳೂರು:ಮOಗಳೂರಿನಲ್ಲಿ ಕುಲ್ಕಿ ಹಬ್ ಎಂಬ ಜೂಸ್ ಹಾಗೂ ಸ್ನಾಕ್ಸ್ ಮಳಿಗೆ ನಡೆಸುತ್ತಿರುವ 24 ರ ಹರೆಯದ ಮೊಹಮ್ಮದ್ ಆಶಿಕ್ ದೇಶದ ಪ್ರತಿಷ್ಠಿತ ಅಡುಗೆ ಸ್ಪರ್ಧೆ ಮಾಸ್ಟರ್ ಶೆಫ್ ನ ಎಂಟನೇ ಸೀಸನ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತಾನಾಡಿದ, ಸೈಫ್ ಸುಲ್ತಾನ್ ಅವರು, ಇದು ಮಂಗಳೂರು ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಅಂತರ್ ರಾಷ್ಟ್ರೀಯ ಖ್ಯಾತಿಯ ಸೂಪರ್ ಸ್ಟಾರ್ ಶೆಫ್‌ಗಳು ತಿರ್ಪುಗಾರರಾಗಿರುವ ಸೋನಿ ಲಿವ್‌ನಲ್ಲಿ ಪ್ರಸಾರವಾದ ಮಾಸ್ಟರ್ ಶೆಫ್ ಸ್ಪರ್ಧೆಯಲ್ಲಿ ಪ್ರಪ್ರಥಮ ಬಾರಿಗೆ ದಕ್ಷಿಣ ಭಾರತೀಯ ಮೊಹಮ್ಮದ್ ಆಶಿಕ್ ಅವರು ಚಾಂಪಿಯನ್ ಆಗಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.

ಈ ಪ್ರತಿಷ್ಟಿತ ಸ್ಪರ್ಧೆಯಲ್ಲಿ ವಿಜೇತರಾಗಿ ತವರಿಗೆ ಆಗಮಿಸುತ್ತಿರುವ ಮೊಹಮ್ಮದ್ ಆಶಿಕ್ ಅವರಿಗೆ ಮಂಗಳೂರಿಗರ ಪರವಾಗಿ ಭವ್ಯ ಸ್ವಾಗತ ನೀಡಲು ಮೊಹಮ್ಮದ್ ಆಶಿಕ್ ಫ್ಯಾನ್ಸ್ ಕುಡ್ಲ ಗೆಳೆಯರ ಬಳಗ ಸಜ್ಜಾಗಿದೆ. ಡಿ. 10ರ ಆದಿತ್ಯವಾರದಂದು ಮಧ್ಯಾಹ್ನ 2 ಗಂಟೆಗೆ ಮುಂಬೈಯಿOದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿರುವ ಮೊಹಮ್ಮದ್ ಆಶಿಕ್ ಅವರಿಗೆ ಮಂಗಳೂರು ಹಾಗು ತುಳುನಾಡಿನ ಸಾಂಪ್ರದಾಯಿಕ ಮತ್ತು ವೈಭವದ ಚೆಂಡೆ ವಾದ್ಯಗಳ ಸಹಿತ ಭರ್ಜರಿ ಸ್ವಾಗತ ನೀಡಲು ತಯಾರಿ ನಡೆದಿದೆ.

ಅವರನ್ನು ವಿಮಾನ ನಿಲ್ದಾಣದಿಂದ ಕರೆದುಕೊಂಡು ಬಂದು ಮಂಗಳೂರು ನಗರದಲ್ಲಿ ಮೆರವಣಿಗೆ ಮಾಡಿ ಬಳಿಕ ನೆಕ್ಸಸ್ ಫಿಝ ಮಾಲ್ ನಲ್ಲಿ ಸನ್ಮಾನಿಸಲಾಗುವುದು ಅಂತ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಝಾಬೀರ್ ಅಹಮ್ಮದ್, ಮೊಹಮ್ಮದ್ ಅಲಿ ಬಂಟ್ವಾಳ, ಅಬ್ದುಲ್ ರೆಹಮಾನ್ ಆಯನ್ಸ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!