ಮOಗಳೂರು:ಮOಗಳೂರಿನಲ್ಲಿ ಕುಲ್ಕಿ ಹಬ್ ಎಂಬ ಜೂಸ್ ಹಾಗೂ ಸ್ನಾಕ್ಸ್ ಮಳಿಗೆ ನಡೆಸುತ್ತಿರುವ 24 ರ ಹರೆಯದ ಮೊಹಮ್ಮದ್ ಆಶಿಕ್ ದೇಶದ ಪ್ರತಿಷ್ಠಿತ ಅಡುಗೆ ಸ್ಪರ್ಧೆ ಮಾಸ್ಟರ್ ಶೆಫ್ ನ ಎಂಟನೇ ಸೀಸನ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತಾನಾಡಿದ, ಸೈಫ್ ಸುಲ್ತಾನ್ ಅವರು, ಇದು ಮಂಗಳೂರು ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಅಂತರ್ ರಾಷ್ಟ್ರೀಯ ಖ್ಯಾತಿಯ ಸೂಪರ್ ಸ್ಟಾರ್ ಶೆಫ್ಗಳು ತಿರ್ಪುಗಾರರಾಗಿರುವ ಸೋನಿ ಲಿವ್ನಲ್ಲಿ ಪ್ರಸಾರವಾದ ಮಾಸ್ಟರ್ ಶೆಫ್ ಸ್ಪರ್ಧೆಯಲ್ಲಿ ಪ್ರಪ್ರಥಮ ಬಾರಿಗೆ ದಕ್ಷಿಣ ಭಾರತೀಯ ಮೊಹಮ್ಮದ್ ಆಶಿಕ್ ಅವರು ಚಾಂಪಿಯನ್ ಆಗಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.
ಈ ಪ್ರತಿಷ್ಟಿತ ಸ್ಪರ್ಧೆಯಲ್ಲಿ ವಿಜೇತರಾಗಿ ತವರಿಗೆ ಆಗಮಿಸುತ್ತಿರುವ ಮೊಹಮ್ಮದ್ ಆಶಿಕ್ ಅವರಿಗೆ ಮಂಗಳೂರಿಗರ ಪರವಾಗಿ ಭವ್ಯ ಸ್ವಾಗತ ನೀಡಲು ಮೊಹಮ್ಮದ್ ಆಶಿಕ್ ಫ್ಯಾನ್ಸ್ ಕುಡ್ಲ ಗೆಳೆಯರ ಬಳಗ ಸಜ್ಜಾಗಿದೆ. ಡಿ. 10ರ ಆದಿತ್ಯವಾರದಂದು ಮಧ್ಯಾಹ್ನ 2 ಗಂಟೆಗೆ ಮುಂಬೈಯಿOದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿರುವ ಮೊಹಮ್ಮದ್ ಆಶಿಕ್ ಅವರಿಗೆ ಮಂಗಳೂರು ಹಾಗು ತುಳುನಾಡಿನ ಸಾಂಪ್ರದಾಯಿಕ ಮತ್ತು ವೈಭವದ ಚೆಂಡೆ ವಾದ್ಯಗಳ ಸಹಿತ ಭರ್ಜರಿ ಸ್ವಾಗತ ನೀಡಲು ತಯಾರಿ ನಡೆದಿದೆ.
ಅವರನ್ನು ವಿಮಾನ ನಿಲ್ದಾಣದಿಂದ ಕರೆದುಕೊಂಡು ಬಂದು ಮಂಗಳೂರು ನಗರದಲ್ಲಿ ಮೆರವಣಿಗೆ ಮಾಡಿ ಬಳಿಕ ನೆಕ್ಸಸ್ ಫಿಝ ಮಾಲ್ ನಲ್ಲಿ ಸನ್ಮಾನಿಸಲಾಗುವುದು ಅಂತ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಝಾಬೀರ್ ಅಹಮ್ಮದ್, ಮೊಹಮ್ಮದ್ ಅಲಿ ಬಂಟ್ವಾಳ, ಅಬ್ದುಲ್ ರೆಹಮಾನ್ ಆಯನ್ಸ್ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…