ಮOಗಳೂರು:ಮOಗಳೂರಿನಲ್ಲಿ ಕುಲ್ಕಿ ಹಬ್ ಎಂಬ ಜೂಸ್ ಹಾಗೂ ಸ್ನಾಕ್ಸ್ ಮಳಿಗೆ ನಡೆಸುತ್ತಿರುವ 24 ರ ಹರೆಯದ ಮೊಹಮ್ಮದ್ ಆಶಿಕ್ ದೇಶದ ಪ್ರತಿಷ್ಠಿತ ಅಡುಗೆ ಸ್ಪರ್ಧೆ ಮಾಸ್ಟರ್ ಶೆಫ್ ನ ಎಂಟನೇ ಸೀಸನ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತಾನಾಡಿದ, ಸೈಫ್ ಸುಲ್ತಾನ್ ಅವರು, ಇದು ಮಂಗಳೂರು ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಅಂತರ್ ರಾಷ್ಟ್ರೀಯ ಖ್ಯಾತಿಯ ಸೂಪರ್ ಸ್ಟಾರ್ ಶೆಫ್ಗಳು ತಿರ್ಪುಗಾರರಾಗಿರುವ ಸೋನಿ ಲಿವ್ನಲ್ಲಿ ಪ್ರಸಾರವಾದ ಮಾಸ್ಟರ್ ಶೆಫ್ ಸ್ಪರ್ಧೆಯಲ್ಲಿ ಪ್ರಪ್ರಥಮ ಬಾರಿಗೆ ದಕ್ಷಿಣ ಭಾರತೀಯ ಮೊಹಮ್ಮದ್ ಆಶಿಕ್ ಅವರು ಚಾಂಪಿಯನ್ ಆಗಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.
ಈ ಪ್ರತಿಷ್ಟಿತ ಸ್ಪರ್ಧೆಯಲ್ಲಿ ವಿಜೇತರಾಗಿ ತವರಿಗೆ ಆಗಮಿಸುತ್ತಿರುವ ಮೊಹಮ್ಮದ್ ಆಶಿಕ್ ಅವರಿಗೆ ಮಂಗಳೂರಿಗರ ಪರವಾಗಿ ಭವ್ಯ ಸ್ವಾಗತ ನೀಡಲು ಮೊಹಮ್ಮದ್ ಆಶಿಕ್ ಫ್ಯಾನ್ಸ್ ಕುಡ್ಲ ಗೆಳೆಯರ ಬಳಗ ಸಜ್ಜಾಗಿದೆ. ಡಿ. 10ರ ಆದಿತ್ಯವಾರದಂದು ಮಧ್ಯಾಹ್ನ 2 ಗಂಟೆಗೆ ಮುಂಬೈಯಿOದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿರುವ ಮೊಹಮ್ಮದ್ ಆಶಿಕ್ ಅವರಿಗೆ ಮಂಗಳೂರು ಹಾಗು ತುಳುನಾಡಿನ ಸಾಂಪ್ರದಾಯಿಕ ಮತ್ತು ವೈಭವದ ಚೆಂಡೆ ವಾದ್ಯಗಳ ಸಹಿತ ಭರ್ಜರಿ ಸ್ವಾಗತ ನೀಡಲು ತಯಾರಿ ನಡೆದಿದೆ.
ಅವರನ್ನು ವಿಮಾನ ನಿಲ್ದಾಣದಿಂದ ಕರೆದುಕೊಂಡು ಬಂದು ಮಂಗಳೂರು ನಗರದಲ್ಲಿ ಮೆರವಣಿಗೆ ಮಾಡಿ ಬಳಿಕ ನೆಕ್ಸಸ್ ಫಿಝ ಮಾಲ್ ನಲ್ಲಿ ಸನ್ಮಾನಿಸಲಾಗುವುದು ಅಂತ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಝಾಬೀರ್ ಅಹಮ್ಮದ್, ಮೊಹಮ್ಮದ್ ಅಲಿ ಬಂಟ್ವಾಳ, ಅಬ್ದುಲ್ ರೆಹಮಾನ್ ಆಯನ್ಸ್ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…