ಮOಗಳೂರು:ಮOಗಳೂರಿನಲ್ಲಿ ಕುಲ್ಕಿ ಹಬ್ ಎಂಬ ಜೂಸ್ ಹಾಗೂ ಸ್ನಾಕ್ಸ್ ಮಳಿಗೆ ನಡೆಸುತ್ತಿರುವ 24 ರ ಹರೆಯದ ಮೊಹಮ್ಮದ್ ಆಶಿಕ್ ದೇಶದ ಪ್ರತಿಷ್ಠಿತ ಅಡುಗೆ ಸ್ಪರ್ಧೆ ಮಾಸ್ಟರ್ ಶೆಫ್ ನ ಎಂಟನೇ ಸೀಸನ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತಾನಾಡಿದ, ಸೈಫ್ ಸುಲ್ತಾನ್ ಅವರು, ಇದು ಮಂಗಳೂರು ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಅಂತರ್ ರಾಷ್ಟ್ರೀಯ ಖ್ಯಾತಿಯ ಸೂಪರ್ ಸ್ಟಾರ್ ಶೆಫ್ಗಳು ತಿರ್ಪುಗಾರರಾಗಿರುವ ಸೋನಿ ಲಿವ್ನಲ್ಲಿ ಪ್ರಸಾರವಾದ ಮಾಸ್ಟರ್ ಶೆಫ್ ಸ್ಪರ್ಧೆಯಲ್ಲಿ ಪ್ರಪ್ರಥಮ ಬಾರಿಗೆ ದಕ್ಷಿಣ ಭಾರತೀಯ ಮೊಹಮ್ಮದ್ ಆಶಿಕ್ ಅವರು ಚಾಂಪಿಯನ್ ಆಗಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.
ಈ ಪ್ರತಿಷ್ಟಿತ ಸ್ಪರ್ಧೆಯಲ್ಲಿ ವಿಜೇತರಾಗಿ ತವರಿಗೆ ಆಗಮಿಸುತ್ತಿರುವ ಮೊಹಮ್ಮದ್ ಆಶಿಕ್ ಅವರಿಗೆ ಮಂಗಳೂರಿಗರ ಪರವಾಗಿ ಭವ್ಯ ಸ್ವಾಗತ ನೀಡಲು ಮೊಹಮ್ಮದ್ ಆಶಿಕ್ ಫ್ಯಾನ್ಸ್ ಕುಡ್ಲ ಗೆಳೆಯರ ಬಳಗ ಸಜ್ಜಾಗಿದೆ. ಡಿ. 10ರ ಆದಿತ್ಯವಾರದಂದು ಮಧ್ಯಾಹ್ನ 2 ಗಂಟೆಗೆ ಮುಂಬೈಯಿOದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿರುವ ಮೊಹಮ್ಮದ್ ಆಶಿಕ್ ಅವರಿಗೆ ಮಂಗಳೂರು ಹಾಗು ತುಳುನಾಡಿನ ಸಾಂಪ್ರದಾಯಿಕ ಮತ್ತು ವೈಭವದ ಚೆಂಡೆ ವಾದ್ಯಗಳ ಸಹಿತ ಭರ್ಜರಿ ಸ್ವಾಗತ ನೀಡಲು ತಯಾರಿ ನಡೆದಿದೆ.
ಅವರನ್ನು ವಿಮಾನ ನಿಲ್ದಾಣದಿಂದ ಕರೆದುಕೊಂಡು ಬಂದು ಮಂಗಳೂರು ನಗರದಲ್ಲಿ ಮೆರವಣಿಗೆ ಮಾಡಿ ಬಳಿಕ ನೆಕ್ಸಸ್ ಫಿಝ ಮಾಲ್ ನಲ್ಲಿ ಸನ್ಮಾನಿಸಲಾಗುವುದು ಅಂತ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಝಾಬೀರ್ ಅಹಮ್ಮದ್, ಮೊಹಮ್ಮದ್ ಅಲಿ ಬಂಟ್ವಾಳ, ಅಬ್ದುಲ್ ರೆಹಮಾನ್ ಆಯನ್ಸ್ ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…