ಮುಲ್ಕಿ: ಡಿಸೆಂಬರ್ 24ರಂದು ನಡೆಯಲಿರುವ ಇತಿಹಾಸ ಪ್ರಸಿದ್ದ ಮುಲ್ಕಿ ಸೀಮೆ ಅರಸು ಕಂಬಳದ ಆಮಂತ್ರಣ ಪತ್ರಿಕೆಯನ್ನು ಪಡುಪಣಂಬೂರು ಅರಮನೆ ಧರ್ಮ ಚಾವಡಿಯಲ್ಲಿ ಮುಲ್ಕಿ ಸೀಮೆ ಅರಸರಾದ ಎಂ ದುಗ್ಗಣ್ಣ ಸಾವಂತರ ನೇತೃತ್ವದಲ್ಲಿ ,ಸಮಿತಿ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿಯವರು ಬಿಡುಗಡೆಗೊಳಿಸಿದರು.
ಈ ಸಂದರ್ಭ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಮಾತನಾಡಿ ಡಿಸೆಂಬರ್ 24ರಂದು ಮುಲ್ಕಿ ಸೀಮೆಯ ಅರಸು ಕಂಬಳ ನಡೆಯಲಿದ್ದು ಅದೇ ದಿನ ಬೆಳಿಗ್ಗೆ ಪ್ರತಿಷ್ಠಿತ ಮುಲ್ಕಿ ಅರಮನೆಗೆ ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣರಾಜ ಒಡೆಯರ್ ಆಗಮಿಸಲಿದ್ದು ಕಂಬಳದಲ್ಲಿ ಭಾಗಿಯಾಗಲಿದ್ದಾರೆ. ಲಕ್ಷಾಂತರ ಮಂದಿ ಕಂಬಳಕ್ಕೆ ಆಗಮಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮವನ್ನು ಮುಲ್ಕಿ ಸೀಮೆಯ ನಾಗರಿಕರು ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭ ರಾಮ ಭಟ್, ಬಂಕಿ ನಾಯಕರು, ಸೂರ್ಯ ಕುಮಾರ್ ಹಳೆಯಂಗಡಿ, ಪಡುಪಣಂಬೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುಧೀರ್, ಗೌತಮ್ ಜೈನ್ ಮುಲ್ಕಿ ಅರಮನೆ,ಕಂಬಳ ಸಮಿತಿಯ ಪದಾಧಿಕಾರಿಗಳಾದ ವಕೀಲ ಚಂದ್ರಶೇಖರ್, ಶ್ಯಾಮ್ ಪ್ರಸಾದ್ ,ನವೀನ್ ಬಾಂಧಕೆರೆ, ಶಶಿಂದ್ರ ಸಾಲ್ಯಾನ್,ವಸಂತ್ ಬೆರ್ನಾಡ್, ಮಹಿಮ್ ಹೆಗ್ದೆ,ಹಳೆಯಂಗಡಿ ಗ್ರಾಪಂ ಸದಸ್ಯ ಅಬ್ದುಲ್ ಖಾದರ್, ಪಿ ಸಿ ಕೋಟ್ಯಾನ್, ಮನ್ಸೂರ್ ಹಳೆಯಂಗಡಿ
ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ದಿನೇಶ್ ಹೊಸಲಕ್ಕೆ, ದಾಮೋದರ್ ಸಾಲ್ಯಾನ್, ಚಂದ್ರಹಾಸ ಪಡು ತೋಟ ಮತ್ತಿತರರು ಉಪಸ್ಥಿತರಿದ್ದರು
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…