ಬಂಟ್ವಾಳ:ಸರಣಿ ಅಂಗಡಿಗೆ ನುಗ್ಗಿ ಕಳವು ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳನೋರ್ವ ನುಗ್ಗಿ ಜಾಲಾಡಿ ಬಳಿಕ ಮೂರು ಅಂಗಡಿಗಳಿಗೆ ನುಗ್ಗಿದ್ದಾನೆ.
ಇದರಲ್ಲಿ ಮೂರು ಅಂಗಡಿಗಳಿoದ ಸುಮಾರು 61 ಸಾವಿರ ರೂ ಕಳವು ಮಾಡಿದ್ದಾನೆ ಇಲ್ಲಿನ ಡಿಶ್ ಟಿ.ವಿ .ರಿಚಾರ್ಜ್ ಅಂಗಡಿಯೊoದರಲ್ಲಿ ಇಡಲಾಗಿದ್ದ ಸುಮಾರು 52 ಸಾವಿರ ನಗದು, ಸಾಯಿ ಲೀಲಾ ಹೋಟೆಲ್ ನ 6ಸಾವಿರ ಹಾಗೂ ಇನ್ನೊಂದು ಅಂಗಡಿಯಿAದ 3 ಸಾವಿರ ರೂ ನಗದು ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಕಳ್ಳ ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಜಾಲಾಡಿ ವಾಪಸು ಹೋಗಿದ್ದಾನೆ. ರಾತ್ರಿ ವೇಳೆ ಭಾರಿ ಮಳೆ ಇದ್ದು, ಕಳ್ಳ ಇದೇ ಸಮಯವನ್ನು ಬಂಡವಾಳವಾಗಿಸಿಕೊoಡು ಕಳವು ಮಾಡಿರಬೇಕು ಎಂದು ಹೇಳಲಾಗಿದೆ. ಕಳ್ಳ ನೋರ್ವ ಬೈಕಿನಲ್ಲಿ ಬಂದು ಆ ಬಳಿಕ ಹೆಲ್ಮಟ್ ಧರಿಸಿ ಅಂಗಡಿಗಳಿಗೆ ನುಗ್ಗಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ,ಕಳ್ಳ ನಿಗಾಗಿ ಬಲೆ ಬೀಸಿದ್ದಾರೆ.
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…