ಜನ ಮನದ ನಾಡಿ ಮಿಡಿತ

Advertisement

2 ಲಕ್ಷ ಹೂಗಳಿಂದ ಶೃಂಗಾರಗೊಳ್ಳಲಿರುವ ಕೃಷಿ ಸಿರಿ ಆಳ್ವಾಸ್ ವಿರಾಸತ್‌ನಲ್ಲಿ ಪುಷ್ಪಕಾಶಿ

ಮೂಡುಬಿದಿರೆ:ಅಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆಯ ಪ್ಯಾಲೇಸ್ ಗೌಂಡ್‌ನಲ್ಲಿ ಇದೇ ಬರುವ 14 ರಿಂದ 17ರವರೆಗೆ ಆಯೋಜಿಸಿರುವ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವಕ್ಕೆ ಬರುವ ಕಲಾಪ್ರೇಮಿಗಳನ್ನು ಸ್ವಾಗತಿಸಲು ವೈವಿಧ್ಯಮಯ ಪುಷ್ಪಗಳ ಪ್ರದರ್ಶನಕ್ಕೆ ಕೃಷಿ ಸಿರಿ ಆವರಣ ಸಜ್ಜುಗೊಂಡಿದೆ.

ವಿರಾಸತ್‌ನಲ್ಲಿ ಕೃಷಿ ಸಂಸ್ಕೃತಿಗೆ ಒತ್ತು ನೀಡುವ ಸಲುವಾಗಿ ಕೃಷಿಯಲ್ಲಿ ಬೀಜದಿಂದ ಮಾರುಕಟ್ಟೆ ವರೆಗಿನ ವಿವಿಧ ಆಯಾಮಗಳ ಚಿತ್ರಣವನ್ನು ಕೃಷಿಮೇಳ ನೀಡಲಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಿರಿ ಅವರಣದ ಹಾರೆಯ ಎತ್ತರದ ಜಾಗದ ಉದ್ದಕ್ಕೂ ಹಸಿರು ಪುಷ್ಪಗಳು ನಳ ನಳಿಸುತ್ತಿವೆ.

ವಿವಿಧ ತಳಿಯ ಸಸಿಗಳನ್ನು ಹೂಕುಂಡದಲ್ಲಿಟ್ಟು ಬೆಳೆಸುತ್ತಿದ್ದು ವಿರಾಸತ್ ವೇಳೆ ಪ್ರದರ್ಶನಗೊಳ್ಳಲಿವೆ. ಫಲ ಹಾಗೂ ಪುಷ್ಪ ಸಂಸ್ಕೃತಿಯ ಅತಿಥ್ಯ ಇಲ್ಲಿ ಸೊಗಯಿಸಲಿದೆ. ಬಯಲು ಸೀಮೆ, ಉತ್ತರ ಕರ್ನಾಟಕ, ಮಹಾರಾಷ್ಟ್ರ ಮುಂತಾದ ಪ್ರದೇಶಗಳಲ್ಲಿ ಹೇರಳವಾಗಿ ಸಿಗುವ ಹೂ, ತರಕಾರಿ, ಹಣ್ಣುಗಳ ಪರಿಚಯ, ಪ್ರದರ್ಶನ ವಿರಾಸತ್ ಮೇಳದಲ್ಲಿ ಇರಲಿದೆ. ದೇಶ ವಿದೇಶಗಳ ತಳಿಗಳು, ದೇಶಿ ತಳಿಗಳು, ಕಸಿ ಮಾಡಿದ ವೈವಿಧ್ಯಮಯ ಫಲಗಳು ಸಿಗಲಿವೆ. ಹೂ ಹಣ್ಣುಗಳಿಂದ ಮಾಡಿದ ಕಲಾಕೃತಿಗಳೂ ಮನ ಸೆಳೆಯಲು ಸಿದ್ಧಗೊಂಡಿವೆ. ಕೃಷಿ ಸಿರಿ ಅವರಣ 2 ಲಕ್ಷ ಹೂಗಳಿಂದ ಶೃಂಗಾರಗೊಳ್ಳಲಿದ್ದು ಒಂದೂವರೆ ಲಕ್ಷ ಗಿಡಗಳ ನಾಟಿ ಕಾರ್ಯ ಮುಗಿದಿದೆ. 50 ಸಾವಿರ ಗಿಡಗಳು ಪೂನಾ ಮತ್ತಿತರ ಕಡೆಗಳಿಂದ ಬರಲಿವೆ. ಇವುಗಳ ನಿರ್ವಹಣೆ ಮತ್ತು ಪ್ರದರ್ಶನದ ಜವಾಬ್ದಾರಿಯನ್ನು ಪೂನಾದ ಖಾಸಗಿ ಕಂಪೆನಿಗೆ ನೀಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!