ಮೂಡುಬಿದಿರೆ:ಅಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆಯ ಪ್ಯಾಲೇಸ್ ಗೌಂಡ್ನಲ್ಲಿ ಇದೇ ಬರುವ 14 ರಿಂದ 17ರವರೆಗೆ ಆಯೋಜಿಸಿರುವ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವಕ್ಕೆ ಬರುವ ಕಲಾಪ್ರೇಮಿಗಳನ್ನು ಸ್ವಾಗತಿಸಲು ವೈವಿಧ್ಯಮಯ ಪುಷ್ಪಗಳ ಪ್ರದರ್ಶನಕ್ಕೆ ಕೃಷಿ ಸಿರಿ ಆವರಣ ಸಜ್ಜುಗೊಂಡಿದೆ.
ವಿರಾಸತ್ನಲ್ಲಿ ಕೃಷಿ ಸಂಸ್ಕೃತಿಗೆ ಒತ್ತು ನೀಡುವ ಸಲುವಾಗಿ ಕೃಷಿಯಲ್ಲಿ ಬೀಜದಿಂದ ಮಾರುಕಟ್ಟೆ ವರೆಗಿನ ವಿವಿಧ ಆಯಾಮಗಳ ಚಿತ್ರಣವನ್ನು ಕೃಷಿಮೇಳ ನೀಡಲಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಿರಿ ಅವರಣದ ಹಾರೆಯ ಎತ್ತರದ ಜಾಗದ ಉದ್ದಕ್ಕೂ ಹಸಿರು ಪುಷ್ಪಗಳು ನಳ ನಳಿಸುತ್ತಿವೆ.
ವಿವಿಧ ತಳಿಯ ಸಸಿಗಳನ್ನು ಹೂಕುಂಡದಲ್ಲಿಟ್ಟು ಬೆಳೆಸುತ್ತಿದ್ದು ವಿರಾಸತ್ ವೇಳೆ ಪ್ರದರ್ಶನಗೊಳ್ಳಲಿವೆ. ಫಲ ಹಾಗೂ ಪುಷ್ಪ ಸಂಸ್ಕೃತಿಯ ಅತಿಥ್ಯ ಇಲ್ಲಿ ಸೊಗಯಿಸಲಿದೆ. ಬಯಲು ಸೀಮೆ, ಉತ್ತರ ಕರ್ನಾಟಕ, ಮಹಾರಾಷ್ಟ್ರ ಮುಂತಾದ ಪ್ರದೇಶಗಳಲ್ಲಿ ಹೇರಳವಾಗಿ ಸಿಗುವ ಹೂ, ತರಕಾರಿ, ಹಣ್ಣುಗಳ ಪರಿಚಯ, ಪ್ರದರ್ಶನ ವಿರಾಸತ್ ಮೇಳದಲ್ಲಿ ಇರಲಿದೆ. ದೇಶ ವಿದೇಶಗಳ ತಳಿಗಳು, ದೇಶಿ ತಳಿಗಳು, ಕಸಿ ಮಾಡಿದ ವೈವಿಧ್ಯಮಯ ಫಲಗಳು ಸಿಗಲಿವೆ. ಹೂ ಹಣ್ಣುಗಳಿಂದ ಮಾಡಿದ ಕಲಾಕೃತಿಗಳೂ ಮನ ಸೆಳೆಯಲು ಸಿದ್ಧಗೊಂಡಿವೆ. ಕೃಷಿ ಸಿರಿ ಅವರಣ 2 ಲಕ್ಷ ಹೂಗಳಿಂದ ಶೃಂಗಾರಗೊಳ್ಳಲಿದ್ದು ಒಂದೂವರೆ ಲಕ್ಷ ಗಿಡಗಳ ನಾಟಿ ಕಾರ್ಯ ಮುಗಿದಿದೆ. 50 ಸಾವಿರ ಗಿಡಗಳು ಪೂನಾ ಮತ್ತಿತರ ಕಡೆಗಳಿಂದ ಬರಲಿವೆ. ಇವುಗಳ ನಿರ್ವಹಣೆ ಮತ್ತು ಪ್ರದರ್ಶನದ ಜವಾಬ್ದಾರಿಯನ್ನು ಪೂನಾದ ಖಾಸಗಿ ಕಂಪೆನಿಗೆ ನೀಡಲಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…