ಮೂಡುಬಿದಿರೆ:ಅಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆಯ ಪ್ಯಾಲೇಸ್ ಗೌಂಡ್ನಲ್ಲಿ ಇದೇ ಬರುವ 14 ರಿಂದ 17ರವರೆಗೆ ಆಯೋಜಿಸಿರುವ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವಕ್ಕೆ ಬರುವ ಕಲಾಪ್ರೇಮಿಗಳನ್ನು ಸ್ವಾಗತಿಸಲು ವೈವಿಧ್ಯಮಯ ಪುಷ್ಪಗಳ ಪ್ರದರ್ಶನಕ್ಕೆ ಕೃಷಿ ಸಿರಿ ಆವರಣ ಸಜ್ಜುಗೊಂಡಿದೆ.
ವಿರಾಸತ್ನಲ್ಲಿ ಕೃಷಿ ಸಂಸ್ಕೃತಿಗೆ ಒತ್ತು ನೀಡುವ ಸಲುವಾಗಿ ಕೃಷಿಯಲ್ಲಿ ಬೀಜದಿಂದ ಮಾರುಕಟ್ಟೆ ವರೆಗಿನ ವಿವಿಧ ಆಯಾಮಗಳ ಚಿತ್ರಣವನ್ನು ಕೃಷಿಮೇಳ ನೀಡಲಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಿರಿ ಅವರಣದ ಹಾರೆಯ ಎತ್ತರದ ಜಾಗದ ಉದ್ದಕ್ಕೂ ಹಸಿರು ಪುಷ್ಪಗಳು ನಳ ನಳಿಸುತ್ತಿವೆ.
ವಿವಿಧ ತಳಿಯ ಸಸಿಗಳನ್ನು ಹೂಕುಂಡದಲ್ಲಿಟ್ಟು ಬೆಳೆಸುತ್ತಿದ್ದು ವಿರಾಸತ್ ವೇಳೆ ಪ್ರದರ್ಶನಗೊಳ್ಳಲಿವೆ. ಫಲ ಹಾಗೂ ಪುಷ್ಪ ಸಂಸ್ಕೃತಿಯ ಅತಿಥ್ಯ ಇಲ್ಲಿ ಸೊಗಯಿಸಲಿದೆ. ಬಯಲು ಸೀಮೆ, ಉತ್ತರ ಕರ್ನಾಟಕ, ಮಹಾರಾಷ್ಟ್ರ ಮುಂತಾದ ಪ್ರದೇಶಗಳಲ್ಲಿ ಹೇರಳವಾಗಿ ಸಿಗುವ ಹೂ, ತರಕಾರಿ, ಹಣ್ಣುಗಳ ಪರಿಚಯ, ಪ್ರದರ್ಶನ ವಿರಾಸತ್ ಮೇಳದಲ್ಲಿ ಇರಲಿದೆ. ದೇಶ ವಿದೇಶಗಳ ತಳಿಗಳು, ದೇಶಿ ತಳಿಗಳು, ಕಸಿ ಮಾಡಿದ ವೈವಿಧ್ಯಮಯ ಫಲಗಳು ಸಿಗಲಿವೆ. ಹೂ ಹಣ್ಣುಗಳಿಂದ ಮಾಡಿದ ಕಲಾಕೃತಿಗಳೂ ಮನ ಸೆಳೆಯಲು ಸಿದ್ಧಗೊಂಡಿವೆ. ಕೃಷಿ ಸಿರಿ ಅವರಣ 2 ಲಕ್ಷ ಹೂಗಳಿಂದ ಶೃಂಗಾರಗೊಳ್ಳಲಿದ್ದು ಒಂದೂವರೆ ಲಕ್ಷ ಗಿಡಗಳ ನಾಟಿ ಕಾರ್ಯ ಮುಗಿದಿದೆ. 50 ಸಾವಿರ ಗಿಡಗಳು ಪೂನಾ ಮತ್ತಿತರ ಕಡೆಗಳಿಂದ ಬರಲಿವೆ. ಇವುಗಳ ನಿರ್ವಹಣೆ ಮತ್ತು ಪ್ರದರ್ಶನದ ಜವಾಬ್ದಾರಿಯನ್ನು ಪೂನಾದ ಖಾಸಗಿ ಕಂಪೆನಿಗೆ ನೀಡಲಾಗಿದೆ.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…