ಮೂಡುಬಿದಿರೆ:ಅಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆಯ ಪ್ಯಾಲೇಸ್ ಗೌಂಡ್ನಲ್ಲಿ ಇದೇ ಬರುವ 14 ರಿಂದ 17ರವರೆಗೆ ಆಯೋಜಿಸಿರುವ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವಕ್ಕೆ ಬರುವ ಕಲಾಪ್ರೇಮಿಗಳನ್ನು ಸ್ವಾಗತಿಸಲು ವೈವಿಧ್ಯಮಯ ಪುಷ್ಪಗಳ ಪ್ರದರ್ಶನಕ್ಕೆ ಕೃಷಿ ಸಿರಿ ಆವರಣ ಸಜ್ಜುಗೊಂಡಿದೆ.
ವಿರಾಸತ್ನಲ್ಲಿ ಕೃಷಿ ಸಂಸ್ಕೃತಿಗೆ ಒತ್ತು ನೀಡುವ ಸಲುವಾಗಿ ಕೃಷಿಯಲ್ಲಿ ಬೀಜದಿಂದ ಮಾರುಕಟ್ಟೆ ವರೆಗಿನ ವಿವಿಧ ಆಯಾಮಗಳ ಚಿತ್ರಣವನ್ನು ಕೃಷಿಮೇಳ ನೀಡಲಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಿರಿ ಅವರಣದ ಹಾರೆಯ ಎತ್ತರದ ಜಾಗದ ಉದ್ದಕ್ಕೂ ಹಸಿರು ಪುಷ್ಪಗಳು ನಳ ನಳಿಸುತ್ತಿವೆ.
ವಿವಿಧ ತಳಿಯ ಸಸಿಗಳನ್ನು ಹೂಕುಂಡದಲ್ಲಿಟ್ಟು ಬೆಳೆಸುತ್ತಿದ್ದು ವಿರಾಸತ್ ವೇಳೆ ಪ್ರದರ್ಶನಗೊಳ್ಳಲಿವೆ. ಫಲ ಹಾಗೂ ಪುಷ್ಪ ಸಂಸ್ಕೃತಿಯ ಅತಿಥ್ಯ ಇಲ್ಲಿ ಸೊಗಯಿಸಲಿದೆ. ಬಯಲು ಸೀಮೆ, ಉತ್ತರ ಕರ್ನಾಟಕ, ಮಹಾರಾಷ್ಟ್ರ ಮುಂತಾದ ಪ್ರದೇಶಗಳಲ್ಲಿ ಹೇರಳವಾಗಿ ಸಿಗುವ ಹೂ, ತರಕಾರಿ, ಹಣ್ಣುಗಳ ಪರಿಚಯ, ಪ್ರದರ್ಶನ ವಿರಾಸತ್ ಮೇಳದಲ್ಲಿ ಇರಲಿದೆ. ದೇಶ ವಿದೇಶಗಳ ತಳಿಗಳು, ದೇಶಿ ತಳಿಗಳು, ಕಸಿ ಮಾಡಿದ ವೈವಿಧ್ಯಮಯ ಫಲಗಳು ಸಿಗಲಿವೆ. ಹೂ ಹಣ್ಣುಗಳಿಂದ ಮಾಡಿದ ಕಲಾಕೃತಿಗಳೂ ಮನ ಸೆಳೆಯಲು ಸಿದ್ಧಗೊಂಡಿವೆ. ಕೃಷಿ ಸಿರಿ ಅವರಣ 2 ಲಕ್ಷ ಹೂಗಳಿಂದ ಶೃಂಗಾರಗೊಳ್ಳಲಿದ್ದು ಒಂದೂವರೆ ಲಕ್ಷ ಗಿಡಗಳ ನಾಟಿ ಕಾರ್ಯ ಮುಗಿದಿದೆ. 50 ಸಾವಿರ ಗಿಡಗಳು ಪೂನಾ ಮತ್ತಿತರ ಕಡೆಗಳಿಂದ ಬರಲಿವೆ. ಇವುಗಳ ನಿರ್ವಹಣೆ ಮತ್ತು ಪ್ರದರ್ಶನದ ಜವಾಬ್ದಾರಿಯನ್ನು ಪೂನಾದ ಖಾಸಗಿ ಕಂಪೆನಿಗೆ ನೀಡಲಾಗಿದೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…