ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಅಯೋಧ್ಯೆಯ ಪವಿತ್ರ ಅಕ್ಷತೆ ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಣೆ.

ಪುತ್ತೂರು: ಶ್ರೀ ರಾಮಜನ್ಮಭೂಮಿ ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು.

ಪುತ್ತೂರಿನ 45 ಉಪವಸತಿ ಕೇಂದ್ರದ ಪ್ರಮುಖರಿಗೆ ಪವಿತ್ರ ಅಕ್ಷತೆಯನ್ನು ಗುರುಪುರ ವಜ್ರದೇಹಿ ಮಠದ ರಾಜಶೇಖರನಂದ ಸ್ವಾಮಿಜೀಯವರು ವಿತರಿಸಿದರು.ಬಳಿಕ ಮಾತನಾಡಿದ ಸ್ವಾಮೀಜಿಯವರು, ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮನ ಮಂದಿರ ನಿರ್ಮಾಣಗೊಂಡು ಪ್ರತಿಷ್ಠಾಪನೆಗೊಳ್ಳುವ ದಿನ ಭಾರತದ ಬಹುದೊಡ್ಡ ಪ್ರಜಾಪ್ರಭುತ್ವ ದಿನವಾಗಿದೆ.

ಈ ದಿನವನ್ನು ಹಿಂದುಗಳು ಪವಿತ್ರ ದಿನವನ್ನಾಗಿ ಆಚರಿಸಬೇಕು ಎಂದರು. ಮೊದಲ ಮೋಕ್ಷದಾಮವೇ ಅಯೋಧ್ಯೆ. ರಾಮ ಎಂಬ ಶಬ್ದಕ್ಕೆ ಆನಂದವಾಗುತ್ತದೆ. ಈಗ ಯಾವುದೇ ಸ್ವಾತಂತ್ರ್ಯ ಸಂಗ್ರಾಮ, ಹೋರಾಟಗಳಿಲ್ಕದೆ ಮಂದಿರ ನಿರ್ಮಾಣಗೊಂಡಿದೆ. ಎಲ್ಲಾ ಮನೆಗಳಲ್ಲಿ ರಾಮನಾಮ ತಾರಕ ಜಪವಗಬೇಕು. ಅಯೋಧ್ಯೆಗೆ ಎಲ್ಲರಿಗೂ ಹೋಗಲು ಸಾಧ್ಯವಿಲ್ಲ. ಅದಕ್ಕಾಗಿ ಕೆಲವೊಂದು ನಿಯಮ ರೂಪು ರೇಸೆಗಳಂತೆ ಪಾಲ್ಗೊಳ್ಳಬೇಕು. ಅಯೋಧ್ಯೆಯ ರಾಮನಿಗೂ ಪುತ್ತೂರಿಗೂ ಕೊಂಡಿಯಾಗಬೇಕೆಂಬ ಉದ್ದೇಶದಿಂದ ಅಯೋಧ್ಯೆಯಲ್ಲಿ ಆರಾಧಿಸಿ ಸಹಸ್ರ ನಾಮಮಂತ್ರಗಳಿಂದ ಉತ್ಪ್ರೇಕ್ಷಿತ ಅಕ್ಷತೆಯನ್ನು ಪ್ರತಿ ಮನೆಗಳಿಗೂ ತಲುಪಿಸಲಾಗುತ್ತಿದೆ. ರಾಮ ಮಂದಿರ ನಿಮಾಣವಾಗುವ ಮೂಲಕ ನೈಜವಾದ ಹಿಂದು ಸಮಾಜ ನಿರ್ಮಾಣವಾಗಲಿದೆ. ಪುತ್ತೂರು ನಗರದಿಂದ 45 ಉಪವಸತಿ ಕೇಂದ್ರಗಳ ಪ್ರಮುಖರಿಗೆ ರಾಜಶೇಖರಾನಂದ ಸ್ವಾಮಿಜಿಯವರು ಅಕ್ಷತೆ ತುಂಬಿದ ಕಲಶವನ್ನು ವಿತರಿಸಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ನಗರ ಸಂಘ ಚಾಲಕ ಶಿವಪ್ರಸಾದ್ ಇ, ವಿಶ್ವಹಿಂದು ಪರಿಷತ್ ಕ್ಷೇತ್ರೀಯ ಸತ್ಸಂಗ್ ಪ್ರಮುಖ್ ಮಹಾಬಲೇಶ್ವರ ಹೆಗ್ಡೆ,ಮುರಳಿಕೃಷ್ಣ ಹಸಂತಡ್ಕ,ವಿಶ್ವಹಿಂದು ಪರಿಷತ್ ಪುತ್ತೂರು ಪ್ರಖಂಡದ ಅಧ್ಯಕ್ಷ ಜನಾರ್ದನ ಬೆಟ್ಟ, ಯುವರಾಜ್ ಪೆರಿಯತ್ತೋಡಿ, ಸಂತೋಷ್ ಬೋನಂತಾಯಿ ವಿಶಾಖ್ ಸಸಿಹಿತ್ಲು, ಮತ್ತಿತ್ತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!