ಪುತ್ತೂರು: ಶ್ರೀ ರಾಮಜನ್ಮಭೂಮಿ ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು.
ಪುತ್ತೂರಿನ 45 ಉಪವಸತಿ ಕೇಂದ್ರದ ಪ್ರಮುಖರಿಗೆ ಪವಿತ್ರ ಅಕ್ಷತೆಯನ್ನು ಗುರುಪುರ ವಜ್ರದೇಹಿ ಮಠದ ರಾಜಶೇಖರನಂದ ಸ್ವಾಮಿಜೀಯವರು ವಿತರಿಸಿದರು.ಬಳಿಕ ಮಾತನಾಡಿದ ಸ್ವಾಮೀಜಿಯವರು, ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮನ ಮಂದಿರ ನಿರ್ಮಾಣಗೊಂಡು ಪ್ರತಿಷ್ಠಾಪನೆಗೊಳ್ಳುವ ದಿನ ಭಾರತದ ಬಹುದೊಡ್ಡ ಪ್ರಜಾಪ್ರಭುತ್ವ ದಿನವಾಗಿದೆ.
ಈ ದಿನವನ್ನು ಹಿಂದುಗಳು ಪವಿತ್ರ ದಿನವನ್ನಾಗಿ ಆಚರಿಸಬೇಕು ಎಂದರು. ಮೊದಲ ಮೋಕ್ಷದಾಮವೇ ಅಯೋಧ್ಯೆ. ರಾಮ ಎಂಬ ಶಬ್ದಕ್ಕೆ ಆನಂದವಾಗುತ್ತದೆ. ಈಗ ಯಾವುದೇ ಸ್ವಾತಂತ್ರ್ಯ ಸಂಗ್ರಾಮ, ಹೋರಾಟಗಳಿಲ್ಕದೆ ಮಂದಿರ ನಿರ್ಮಾಣಗೊಂಡಿದೆ. ಎಲ್ಲಾ ಮನೆಗಳಲ್ಲಿ ರಾಮನಾಮ ತಾರಕ ಜಪವಗಬೇಕು. ಅಯೋಧ್ಯೆಗೆ ಎಲ್ಲರಿಗೂ ಹೋಗಲು ಸಾಧ್ಯವಿಲ್ಲ. ಅದಕ್ಕಾಗಿ ಕೆಲವೊಂದು ನಿಯಮ ರೂಪು ರೇಸೆಗಳಂತೆ ಪಾಲ್ಗೊಳ್ಳಬೇಕು. ಅಯೋಧ್ಯೆಯ ರಾಮನಿಗೂ ಪುತ್ತೂರಿಗೂ ಕೊಂಡಿಯಾಗಬೇಕೆಂಬ ಉದ್ದೇಶದಿಂದ ಅಯೋಧ್ಯೆಯಲ್ಲಿ ಆರಾಧಿಸಿ ಸಹಸ್ರ ನಾಮಮಂತ್ರಗಳಿಂದ ಉತ್ಪ್ರೇಕ್ಷಿತ ಅಕ್ಷತೆಯನ್ನು ಪ್ರತಿ ಮನೆಗಳಿಗೂ ತಲುಪಿಸಲಾಗುತ್ತಿದೆ. ರಾಮ ಮಂದಿರ ನಿಮಾಣವಾಗುವ ಮೂಲಕ ನೈಜವಾದ ಹಿಂದು ಸಮಾಜ ನಿರ್ಮಾಣವಾಗಲಿದೆ. ಪುತ್ತೂರು ನಗರದಿಂದ 45 ಉಪವಸತಿ ಕೇಂದ್ರಗಳ ಪ್ರಮುಖರಿಗೆ ರಾಜಶೇಖರಾನಂದ ಸ್ವಾಮಿಜಿಯವರು ಅಕ್ಷತೆ ತುಂಬಿದ ಕಲಶವನ್ನು ವಿತರಿಸಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ನಗರ ಸಂಘ ಚಾಲಕ ಶಿವಪ್ರಸಾದ್ ಇ, ವಿಶ್ವಹಿಂದು ಪರಿಷತ್ ಕ್ಷೇತ್ರೀಯ ಸತ್ಸಂಗ್ ಪ್ರಮುಖ್ ಮಹಾಬಲೇಶ್ವರ ಹೆಗ್ಡೆ,ಮುರಳಿಕೃಷ್ಣ ಹಸಂತಡ್ಕ,ವಿಶ್ವಹಿಂದು ಪರಿಷತ್ ಪುತ್ತೂರು ಪ್ರಖಂಡದ ಅಧ್ಯಕ್ಷ ಜನಾರ್ದನ ಬೆಟ್ಟ, ಯುವರಾಜ್ ಪೆರಿಯತ್ತೋಡಿ, ಸಂತೋಷ್ ಬೋನಂತಾಯಿ ವಿಶಾಖ್ ಸಸಿಹಿತ್ಲು, ಮತ್ತಿತ್ತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…