ಪುತ್ತೂರು: ಶ್ರೀ ರಾಮಜನ್ಮಭೂಮಿ ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು.
ಪುತ್ತೂರಿನ 45 ಉಪವಸತಿ ಕೇಂದ್ರದ ಪ್ರಮುಖರಿಗೆ ಪವಿತ್ರ ಅಕ್ಷತೆಯನ್ನು ಗುರುಪುರ ವಜ್ರದೇಹಿ ಮಠದ ರಾಜಶೇಖರನಂದ ಸ್ವಾಮಿಜೀಯವರು ವಿತರಿಸಿದರು.ಬಳಿಕ ಮಾತನಾಡಿದ ಸ್ವಾಮೀಜಿಯವರು, ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮನ ಮಂದಿರ ನಿರ್ಮಾಣಗೊಂಡು ಪ್ರತಿಷ್ಠಾಪನೆಗೊಳ್ಳುವ ದಿನ ಭಾರತದ ಬಹುದೊಡ್ಡ ಪ್ರಜಾಪ್ರಭುತ್ವ ದಿನವಾಗಿದೆ.
ಈ ದಿನವನ್ನು ಹಿಂದುಗಳು ಪವಿತ್ರ ದಿನವನ್ನಾಗಿ ಆಚರಿಸಬೇಕು ಎಂದರು. ಮೊದಲ ಮೋಕ್ಷದಾಮವೇ ಅಯೋಧ್ಯೆ. ರಾಮ ಎಂಬ ಶಬ್ದಕ್ಕೆ ಆನಂದವಾಗುತ್ತದೆ. ಈಗ ಯಾವುದೇ ಸ್ವಾತಂತ್ರ್ಯ ಸಂಗ್ರಾಮ, ಹೋರಾಟಗಳಿಲ್ಕದೆ ಮಂದಿರ ನಿರ್ಮಾಣಗೊಂಡಿದೆ. ಎಲ್ಲಾ ಮನೆಗಳಲ್ಲಿ ರಾಮನಾಮ ತಾರಕ ಜಪವಗಬೇಕು. ಅಯೋಧ್ಯೆಗೆ ಎಲ್ಲರಿಗೂ ಹೋಗಲು ಸಾಧ್ಯವಿಲ್ಲ. ಅದಕ್ಕಾಗಿ ಕೆಲವೊಂದು ನಿಯಮ ರೂಪು ರೇಸೆಗಳಂತೆ ಪಾಲ್ಗೊಳ್ಳಬೇಕು. ಅಯೋಧ್ಯೆಯ ರಾಮನಿಗೂ ಪುತ್ತೂರಿಗೂ ಕೊಂಡಿಯಾಗಬೇಕೆಂಬ ಉದ್ದೇಶದಿಂದ ಅಯೋಧ್ಯೆಯಲ್ಲಿ ಆರಾಧಿಸಿ ಸಹಸ್ರ ನಾಮಮಂತ್ರಗಳಿಂದ ಉತ್ಪ್ರೇಕ್ಷಿತ ಅಕ್ಷತೆಯನ್ನು ಪ್ರತಿ ಮನೆಗಳಿಗೂ ತಲುಪಿಸಲಾಗುತ್ತಿದೆ. ರಾಮ ಮಂದಿರ ನಿಮಾಣವಾಗುವ ಮೂಲಕ ನೈಜವಾದ ಹಿಂದು ಸಮಾಜ ನಿರ್ಮಾಣವಾಗಲಿದೆ. ಪುತ್ತೂರು ನಗರದಿಂದ 45 ಉಪವಸತಿ ಕೇಂದ್ರಗಳ ಪ್ರಮುಖರಿಗೆ ರಾಜಶೇಖರಾನಂದ ಸ್ವಾಮಿಜಿಯವರು ಅಕ್ಷತೆ ತುಂಬಿದ ಕಲಶವನ್ನು ವಿತರಿಸಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ನಗರ ಸಂಘ ಚಾಲಕ ಶಿವಪ್ರಸಾದ್ ಇ, ವಿಶ್ವಹಿಂದು ಪರಿಷತ್ ಕ್ಷೇತ್ರೀಯ ಸತ್ಸಂಗ್ ಪ್ರಮುಖ್ ಮಹಾಬಲೇಶ್ವರ ಹೆಗ್ಡೆ,ಮುರಳಿಕೃಷ್ಣ ಹಸಂತಡ್ಕ,ವಿಶ್ವಹಿಂದು ಪರಿಷತ್ ಪುತ್ತೂರು ಪ್ರಖಂಡದ ಅಧ್ಯಕ್ಷ ಜನಾರ್ದನ ಬೆಟ್ಟ, ಯುವರಾಜ್ ಪೆರಿಯತ್ತೋಡಿ, ಸಂತೋಷ್ ಬೋನಂತಾಯಿ ವಿಶಾಖ್ ಸಸಿಹಿತ್ಲು, ಮತ್ತಿತ್ತರರು ಉಪಸ್ಥಿತರಿದ್ದರು.
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…