ಇತರೆ

ಅಯೋಧ್ಯೆಯ ಪವಿತ್ರ ಅಕ್ಷತೆ ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಣೆ.

ಪುತ್ತೂರು: ಶ್ರೀ ರಾಮಜನ್ಮಭೂಮಿ ಆಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು.

ಪುತ್ತೂರಿನ 45 ಉಪವಸತಿ ಕೇಂದ್ರದ ಪ್ರಮುಖರಿಗೆ ಪವಿತ್ರ ಅಕ್ಷತೆಯನ್ನು ಗುರುಪುರ ವಜ್ರದೇಹಿ ಮಠದ ರಾಜಶೇಖರನಂದ ಸ್ವಾಮಿಜೀಯವರು ವಿತರಿಸಿದರು.ಬಳಿಕ ಮಾತನಾಡಿದ ಸ್ವಾಮೀಜಿಯವರು, ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮನ ಮಂದಿರ ನಿರ್ಮಾಣಗೊಂಡು ಪ್ರತಿಷ್ಠಾಪನೆಗೊಳ್ಳುವ ದಿನ ಭಾರತದ ಬಹುದೊಡ್ಡ ಪ್ರಜಾಪ್ರಭುತ್ವ ದಿನವಾಗಿದೆ.

ಈ ದಿನವನ್ನು ಹಿಂದುಗಳು ಪವಿತ್ರ ದಿನವನ್ನಾಗಿ ಆಚರಿಸಬೇಕು ಎಂದರು. ಮೊದಲ ಮೋಕ್ಷದಾಮವೇ ಅಯೋಧ್ಯೆ. ರಾಮ ಎಂಬ ಶಬ್ದಕ್ಕೆ ಆನಂದವಾಗುತ್ತದೆ. ಈಗ ಯಾವುದೇ ಸ್ವಾತಂತ್ರ್ಯ ಸಂಗ್ರಾಮ, ಹೋರಾಟಗಳಿಲ್ಕದೆ ಮಂದಿರ ನಿರ್ಮಾಣಗೊಂಡಿದೆ. ಎಲ್ಲಾ ಮನೆಗಳಲ್ಲಿ ರಾಮನಾಮ ತಾರಕ ಜಪವಗಬೇಕು. ಅಯೋಧ್ಯೆಗೆ ಎಲ್ಲರಿಗೂ ಹೋಗಲು ಸಾಧ್ಯವಿಲ್ಲ. ಅದಕ್ಕಾಗಿ ಕೆಲವೊಂದು ನಿಯಮ ರೂಪು ರೇಸೆಗಳಂತೆ ಪಾಲ್ಗೊಳ್ಳಬೇಕು. ಅಯೋಧ್ಯೆಯ ರಾಮನಿಗೂ ಪುತ್ತೂರಿಗೂ ಕೊಂಡಿಯಾಗಬೇಕೆಂಬ ಉದ್ದೇಶದಿಂದ ಅಯೋಧ್ಯೆಯಲ್ಲಿ ಆರಾಧಿಸಿ ಸಹಸ್ರ ನಾಮಮಂತ್ರಗಳಿಂದ ಉತ್ಪ್ರೇಕ್ಷಿತ ಅಕ್ಷತೆಯನ್ನು ಪ್ರತಿ ಮನೆಗಳಿಗೂ ತಲುಪಿಸಲಾಗುತ್ತಿದೆ. ರಾಮ ಮಂದಿರ ನಿಮಾಣವಾಗುವ ಮೂಲಕ ನೈಜವಾದ ಹಿಂದು ಸಮಾಜ ನಿರ್ಮಾಣವಾಗಲಿದೆ. ಪುತ್ತೂರು ನಗರದಿಂದ 45 ಉಪವಸತಿ ಕೇಂದ್ರಗಳ ಪ್ರಮುಖರಿಗೆ ರಾಜಶೇಖರಾನಂದ ಸ್ವಾಮಿಜಿಯವರು ಅಕ್ಷತೆ ತುಂಬಿದ ಕಲಶವನ್ನು ವಿತರಿಸಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ನಗರ ಸಂಘ ಚಾಲಕ ಶಿವಪ್ರಸಾದ್ ಇ, ವಿಶ್ವಹಿಂದು ಪರಿಷತ್ ಕ್ಷೇತ್ರೀಯ ಸತ್ಸಂಗ್ ಪ್ರಮುಖ್ ಮಹಾಬಲೇಶ್ವರ ಹೆಗ್ಡೆ,ಮುರಳಿಕೃಷ್ಣ ಹಸಂತಡ್ಕ,ವಿಶ್ವಹಿಂದು ಪರಿಷತ್ ಪುತ್ತೂರು ಪ್ರಖಂಡದ ಅಧ್ಯಕ್ಷ ಜನಾರ್ದನ ಬೆಟ್ಟ, ಯುವರಾಜ್ ಪೆರಿಯತ್ತೋಡಿ, ಸಂತೋಷ್ ಬೋನಂತಾಯಿ ವಿಶಾಖ್ ಸಸಿಹಿತ್ಲು, ಮತ್ತಿತ್ತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…

30 mins ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…

36 mins ago

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…

40 mins ago

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

19 hours ago

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್‌ಆರ್‌ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…

19 hours ago

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…

23 hours ago