ಬOಟ್ವಾಳ:ದನಗಳನ್ನು ಕದ್ದು ತಂದು ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ತುಂಬಿಸಿ ವದೆ ಮಾಡಲು ಕೊಂಡು ಹೋಗುವ ವೇಳೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್ .ಐ.ರಾಮಕೃಷ್ಣ ನೇತೃತ್ವದ ತಂಡ ದನಗಳನ್ನು ಸೇಫ್ ಮಾಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಲೊರೆಟ್ಟುಪದವು ಬಳಿ ನಡೆದಿದೆ.
ಲೊರೆಟ್ಟೊಪದವು ಸಮೀಪದ ಟಿಪ್ಪು ನಗರ ಎಂಬಲ್ಲಿ ಪೊಲೀಸರು ಬೆನ್ನಟ್ಟಿ ದನಗಳನ್ನು ವಶಪಡಿಸಿಕೊಂಡಿದ್ದಾರೆ. ಓಮ್ನಿ ಕಾರಿನಲ್ಲಿ ಐದು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ತುಂಬಿಸಲಾಗಿತ್ತು. ಜಾಬೀರ್ ಮತ್ತು ನಾಸೀರ್ ಎಂಬವರು ಕಾರು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಎಸ್. ಐ.ರಾಮಕೃಷ್ಣ ಅವರು ರೌಂಡ್ಸ್ನಲ್ಲಿದ್ದ ಸಂದರ್ಭದಲ್ಲಿ ಓಮ್ನಿ ಕಾರೊಂದರ ಮೇಲೆ ಸಂಶಯಗೊOಡು ಬೆನ್ನು ಬಿದ್ದಾಗ ಅತೀ ವೇಗದೊಂದಿಗೆ ಕಾರು ಹೋಗುವುದು ಕಂಡು ಬಂದಿದೆ.
ಎಸ್.ಐ.ಅವರ ಸಂಶಯ ಬಲಗೊಂಡು ಲೊರೆಟ್ಟೊಪದವಿನಿಂದ ಬೆನ್ನಟ್ಟಿದಾಗ ಕಾರು ಟಿಪ್ಪುನಗರ ಕಡೆಗೆ ಹೋಗಿ ಕಾರನ್ನು ಅಲ್ಲೇ ಬಿಟ್ಟು ಚಾಲಕ ಮತ್ತು ಕಾರಿನಲ್ಲಿದ್ದ ಇನ್ನೋರ್ವ ಎಸ್ಕೇಪ್ ಆಗಿದ್ದಾರೆ. ಆರೋಪಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಇಬ್ಬರು ಕೂಡ ಈ ಹಿಂದೆ ದನ ಕಳವು ಪ್ರಕರಣದ ಪ್ರಮುಖ ಆರೋಪಿಗಳೆಂದು ತಿಳಿದು ಬಂದಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…