ಬOಟ್ವಾಳ:ದನಗಳನ್ನು ಕದ್ದು ತಂದು ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ತುಂಬಿಸಿ ವದೆ ಮಾಡಲು ಕೊಂಡು ಹೋಗುವ ವೇಳೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್ .ಐ.ರಾಮಕೃಷ್ಣ ನೇತೃತ್ವದ ತಂಡ ದನಗಳನ್ನು ಸೇಫ್ ಮಾಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಲೊರೆಟ್ಟುಪದವು ಬಳಿ ನಡೆದಿದೆ.
ಲೊರೆಟ್ಟೊಪದವು ಸಮೀಪದ ಟಿಪ್ಪು ನಗರ ಎಂಬಲ್ಲಿ ಪೊಲೀಸರು ಬೆನ್ನಟ್ಟಿ ದನಗಳನ್ನು ವಶಪಡಿಸಿಕೊಂಡಿದ್ದಾರೆ. ಓಮ್ನಿ ಕಾರಿನಲ್ಲಿ ಐದು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ತುಂಬಿಸಲಾಗಿತ್ತು. ಜಾಬೀರ್ ಮತ್ತು ನಾಸೀರ್ ಎಂಬವರು ಕಾರು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಎಸ್. ಐ.ರಾಮಕೃಷ್ಣ ಅವರು ರೌಂಡ್ಸ್ನಲ್ಲಿದ್ದ ಸಂದರ್ಭದಲ್ಲಿ ಓಮ್ನಿ ಕಾರೊಂದರ ಮೇಲೆ ಸಂಶಯಗೊOಡು ಬೆನ್ನು ಬಿದ್ದಾಗ ಅತೀ ವೇಗದೊಂದಿಗೆ ಕಾರು ಹೋಗುವುದು ಕಂಡು ಬಂದಿದೆ.
ಎಸ್.ಐ.ಅವರ ಸಂಶಯ ಬಲಗೊಂಡು ಲೊರೆಟ್ಟೊಪದವಿನಿಂದ ಬೆನ್ನಟ್ಟಿದಾಗ ಕಾರು ಟಿಪ್ಪುನಗರ ಕಡೆಗೆ ಹೋಗಿ ಕಾರನ್ನು ಅಲ್ಲೇ ಬಿಟ್ಟು ಚಾಲಕ ಮತ್ತು ಕಾರಿನಲ್ಲಿದ್ದ ಇನ್ನೋರ್ವ ಎಸ್ಕೇಪ್ ಆಗಿದ್ದಾರೆ. ಆರೋಪಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಇಬ್ಬರು ಕೂಡ ಈ ಹಿಂದೆ ದನ ಕಳವು ಪ್ರಕರಣದ ಪ್ರಮುಖ ಆರೋಪಿಗಳೆಂದು ತಿಳಿದು ಬಂದಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…