ಬOಟ್ವಾಳ:ದನಗಳನ್ನು ಕದ್ದು ತಂದು ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ತುಂಬಿಸಿ ವದೆ ಮಾಡಲು ಕೊಂಡು ಹೋಗುವ ವೇಳೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್ .ಐ.ರಾಮಕೃಷ್ಣ ನೇತೃತ್ವದ ತಂಡ ದನಗಳನ್ನು ಸೇಫ್ ಮಾಡಿದ್ದು, ಆರೋಪಿಗಳು ಪರಾರಿಯಾದ ಘಟನೆ ಲೊರೆಟ್ಟುಪದವು ಬಳಿ ನಡೆದಿದೆ.
ಲೊರೆಟ್ಟೊಪದವು ಸಮೀಪದ ಟಿಪ್ಪು ನಗರ ಎಂಬಲ್ಲಿ ಪೊಲೀಸರು ಬೆನ್ನಟ್ಟಿ ದನಗಳನ್ನು ವಶಪಡಿಸಿಕೊಂಡಿದ್ದಾರೆ. ಓಮ್ನಿ ಕಾರಿನಲ್ಲಿ ಐದು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ತುಂಬಿಸಲಾಗಿತ್ತು. ಜಾಬೀರ್ ಮತ್ತು ನಾಸೀರ್ ಎಂಬವರು ಕಾರು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಎಸ್. ಐ.ರಾಮಕೃಷ್ಣ ಅವರು ರೌಂಡ್ಸ್ನಲ್ಲಿದ್ದ ಸಂದರ್ಭದಲ್ಲಿ ಓಮ್ನಿ ಕಾರೊಂದರ ಮೇಲೆ ಸಂಶಯಗೊOಡು ಬೆನ್ನು ಬಿದ್ದಾಗ ಅತೀ ವೇಗದೊಂದಿಗೆ ಕಾರು ಹೋಗುವುದು ಕಂಡು ಬಂದಿದೆ.
ಎಸ್.ಐ.ಅವರ ಸಂಶಯ ಬಲಗೊಂಡು ಲೊರೆಟ್ಟೊಪದವಿನಿಂದ ಬೆನ್ನಟ್ಟಿದಾಗ ಕಾರು ಟಿಪ್ಪುನಗರ ಕಡೆಗೆ ಹೋಗಿ ಕಾರನ್ನು ಅಲ್ಲೇ ಬಿಟ್ಟು ಚಾಲಕ ಮತ್ತು ಕಾರಿನಲ್ಲಿದ್ದ ಇನ್ನೋರ್ವ ಎಸ್ಕೇಪ್ ಆಗಿದ್ದಾರೆ. ಆರೋಪಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಇಬ್ಬರು ಕೂಡ ಈ ಹಿಂದೆ ದನ ಕಳವು ಪ್ರಕರಣದ ಪ್ರಮುಖ ಆರೋಪಿಗಳೆಂದು ತಿಳಿದು ಬಂದಿದೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…