ಇದೇನು ವಿಚಾರ ಅಂದುಕೊಂಡಿದ್ದೀರಾ? ಬಿಸಿರೋಡಿನಲ್ಲಿ ಬಸ್ ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳ ಸಮೂಹ, ಕೊನೆಗೆ ಬಸ್ ವ್ಯವಸ್ಥೆ ಇಲ್ಲದೆ ಸೊರಗಿಹೋದ ವಿದ್ಯಾರ್ಥಿಗಳು ಕಾಲೇಜಿಗೆ ತೆರಳು ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡಲು ಈ ಅಭಿಯಾನ ವನ್ನು ಆರಂಬಿಸಿದ್ದಾರೆ.
ಬೆಳಿಗ್ಗೆ ಸುಮಾರು 7 ಗಂಟೆಯಿಂದ 9 ಗಂಟೆವರೆಗೂ ಬಿಸಿರೋಡಿನ ಸರ್ವೀಸ್ ರಸ್ತೆಯಲ್ಲಿ ಕಿಕ್ಕಿರಿದು ಬಸ್ ಗಾಗಿ ಕಾಯುತ್ತಾ ನಿಂತಿರುವ ವಿದ್ಯಾರ್ಥಿಗಳು….
ಕೊನೆಗೆ ಸಿಕ್ಕ ಸಿಕ್ಕ ಬಸ್ ಗಳ ಪುಟ್ ಪಾತ್ ನಲ್ಲಿ ನೇತಾಡಿಕೊಂಡು ಜೀವದ ಭಯದಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಲು ಇಲಾಖೆಗೆ ಆಗಲಿ ಜನಪ್ರತಿನಿಧಿಗಳಾಗಲಿ ಸಾಧ್ಯವಾಗಿಲ್ಲ ಅನ್ನುವ ಕಾರಣಕ್ಕಾಗಿ ವಿದ್ಯಾರ್ಥಿಗಳು ಅಭಿಯಾನ ಪ್ರಾರಂಭ ಮಾಡಿದ್ದಾರೆ. ಇದನ್ನು ಕಂಡಾದರೂ ಜನಪ್ರತಿನಿಧಿಗಳು ಮತ್ತು ಇಲಾಖೆ ಎಚ್ಚೆತ್ತ ಕೊಂಡು ವ್ಯವಸ್ಥೆ ಕಲ್ಪಿಸಿಯಾರು ಎಂಬ ಭರವಸೆ ಇವರದು.
ಬಸ್ ಒದಗಿಸಿ: ಅಭಿಯಾನ:ಬೆಳಿಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಬಸ್ ಗಾಗಿ ಬಿಸಿರೋಡಿನಲ್ಲಿ ಕಾಯುವುದು ಮತ್ತು ಬಸ್ ನ ಪುಟ್ ಪಾತ್ ನಲ್ಲಿ ನೇತಾಡಿಕೊಂಡು ಹೋಗುವ ದೃಶ್ಯ ಅನೇಕ ವರ್ಷಗಳಿಂದ ನೋಡುತ್ತಾ ಇದ್ದೇವೆ.
ಕನಿಷ್ಟ ಪಕ್ಷ ಬೆಳಿಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಕೆ.ಎಸ್.ಆರ್.ಟಿ.ಬಸ್ ನಿಗಮ ದವರು ಹೆಚ್ಚು ವರಿ ಬಸ್ ಹಾಕಿದರೆ ಈ ಸಮಸ್ಯೆ ಉಂಟಾಗುತ್ತಿರಲಿಲ್ಲ.
ಬೆಳಿಗ್ಗೆ ಕಾಲೇಜಿಗೆ ತೆರಳುವ ವೇಳೆ ಪುತ್ತೂರು ಕಡೆಯಿಂದ ವಿಟ್ಲ ಮತ್ತು ಬೆಳ್ತಂಗಡಿ ಕಡೆಯಿಂದ ಬರುವ ಬಹುತೇಕ ಎಲ್ಲಾ ಬಸ್ ಗಳಲ್ಲಿ ಪ್ಯಾಕಪ್ ಆಗಿರುತ್ತದೆ. ಬಿಸಿರೋಡಿಗೆ ಬರುವಾಗ ಬಸ್ ಹತ್ತಲು ಸಾಧ್ಯವಿಲ್ಲ ದಂತೆ ಜನ ಕಿಕ್ಕಿರಿದು ತುಂಬಿಕೊಂಡಿರುವ ಕಾರಣ ವಿದ್ಯಾರ್ಥಿಗಳಿಗೆ ಮೆಟ್ಟಿಲು ಹತ್ತಲು ಜಾಗವಿಲ್ಲದೆ ನೇತಾಡಿಕೊಂಡು ಹೋಗಬೇಕಾಗಿದೆ.
ಬಸ್ ವ್ಯವಸ್ಥೆ ಸರಿಯಲ್ಲ ದ ಕಾರಣ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ತೆರಳಲು ಅಸಾಧ್ಯವಾಗುತ್ತಿದೆ.
ಬೆಳಿಗ್ಗೆ ಹೊತ್ತಿನ ಪಾಠಗಳನ್ನು ಮಿಸ್ ಮಾಡುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಳೆದ ವಾರ ಬಸ್ ನಲ್ಲಿ ನೇತಾಡುತ್ತಿದ್ದಂತೆ ಬಸ್ ನ ಬಾಗಿಲು ತುಂಡಾಗಿ ವಿದ್ಯಾರ್ಥಿಗಳ ಕೈಯಲ್ಲಿ ಬಂದಿತ್ತು. ಈ ರೀತಿಯಲ್ಲಿ ಜೀವದ ಹಂಗು ತೊರೆದು ಪ್ರಯಾಣಿಸುವ ವಿದ್ಯಾರ್ಥಿಗಳ ಜೀವಕ್ಕೆ ಏನಾದರೂ ಆದರೆ ಬೆಲೆ ಕೊಡುವವರು ಯಾರು? ಅಭಿವೃದ್ಧಿ ಬಗ್ಗೆ ಮಾತನಾಡುವ ಜನಪ್ರತಿನಿಧಿಗಳೆ ಇತ್ತ ಚಿತ್ತ ಹರಿಸಿ ಎಂದು ಅವರು ಮನವಿ ಮಾಡಿದ್ದಾರೆ . ಹಾಗಾಗಿ ಸಿ.ಟಿ.ಬಸ್ ನ ವ್ಯವಸ್ಥೆ ಯಾದರೂ ಕಲ್ಪಿಸಿ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…